ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

Public TV
1 Min Read

ಹೈದರಾಬಾದ್: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‍ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಸರ್ಕಾರ, ವೈಎಸ್‍ಆರ್ ಕಾಂಗ್ರೆಸ್ ಬಂದ್‍ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳೂ ರಸ್ತೆಗಿಳಿಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ:  ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‍ಗೆ ಬೆಂಬಲ ಸೂಚಿಸಿದ್ದಾರೆ.ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್‍ಗೆ ಬೆಂಬಲ ಘೋಷಿಸಿವೆ.

Share This Article
Leave a Comment

Leave a Reply

Your email address will not be published. Required fields are marked *