ಮದುವೆಗೆ ನಿರಾಕರಣೆ- ಗೆಳತಿಯನ್ನೇ ಕೊಲೆ ಮಾಡಿದ ಟೆಕ್ಕಿ

Public TV
1 Min Read

ಅಮರಾವತಿ: ಗೆಳತಿ (Friend)) ಮದುವೆಗೆ (Wedding) ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಉಯತ್ನಿಸಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪೆದಕಕಣಿ ಮಂಡಲದ ತಕ್ಕೆಲ್ಲಪಾಡು ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ಜಿಲ್ಲೆಯ ವುಯ್ಯೂರು ಮಂಡಲದ ಕೃಷ್ಣಾಪುರಂ ಗ್ರಾಮದ ತಪಸ್ವಿ (20) ಮೃತ ಯುವತಿ (Girl). 2 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತಪಸ್ವಿಗೆ ವಿಜಯವಾಡ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಜ್ಞಾನೇಶ್ವರ್ ಪರಿಚಯವಾಗಿದ್ದ. ಇತ್ತೀಚೆಗೆ ತಪಸ್ವಿಯನ್ನು ಜ್ಞಾನೇಶ್ವರ್ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ ತಪಸ್ವಿ ನಿರಾಕರಿಸಿದ್ದಳು.

ತಪಸ್ವಿ ಮದುವೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ಜ್ಞಾನೇಶ್ವರ್ ಆಕೆಯನ್ನು ಕೊಲ್ಲುವ ಉದ್ದೇಶದಿಂದ ಆಕೆಯ ಕೋಣೆಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಮನವೊಲಿಸಲು ಯತ್ನಿಸಿದ್ದ. ಆ ವೇಳೆ ಅವರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಜ್ಞಾನೇಶ್ವರ್ ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾನೆ. ಇದನ್ನು ನೋಡಿದ ತಪಸ್ವಿಯ ರೂಮ್‍ಮೇಟ್ ಸಹಾಯ ಪಡೆಯಲು ಹೊರಗೆ ಧಾವಿಸಿದ್ದಾಳೆ. ತಪಸ್ವಿಯು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ.

ಆದರೆ ಇದೇ ವೇಳೆ ಜ್ಞಾನೇಂದ್ರ ತೀವ್ರಗೊಂಡು ಗಾಯಗೊಂಡಿದ್ದ ತಪಸ್ವಿಯನ್ನು ಕೊಣೆಗೆ ಎಳೆದೊಯ್ದು ಬೀಗ ಹಾಕಿದ್ದಾನೆ. ಅದಾದ ಬಳಿಕ ತಾನು ಚಾಕುವಿನಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗಲಾಟೆ ಕೇಳಿದ ಸ್ಥಳೀಯರು ಮನೆಗೆ ಧಾವಿಸಿ ತಪಸ್ವಿಯನ್ನು ಗುಂಟೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಆರೋಪಿ ಜ್ಞಾನೇಶ್ವರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನಿಗೆ ಪ್ರಥಮ ಚಿಕಿತ್ಸೆ ನೀಡಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಪತ್ನಿ, ಮಗುವಿಗೆ ಆ್ಯಸಿಡ್ ಎರೆಚಿದ ಮಹಿಳೆ

ಈ ಮಧ್ಯೆ ತಪಸ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾಳೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜ್ಞಾನೇಶ್ವರನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚುನಾವಣೆಗೆ ಹಿಂದುತ್ವ, ದೇಶಾಭಿಮಾನವೇ ಬಿಜೆಪಿ ತಂತ್ರ- ಸಚಿವರಿಗೆ ಹೈಕಮಾಂಡ್ ಟಾಸ್ಕ್ ಡೆಡ್ ಲೈನ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *