ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ (Andhra Pradesh) ಮೂಲದ ಯೋಧ (Army Jawan) ಹುತಾತ್ಮರಾಗಿದ್ದಾರೆ.

ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ (Sathya Sai) ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ. ಇದನ್ನೂ ಓದಿ: ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: India’s Strike | ಪಾಕ್‌ ಮೇಲೆ ಭಾರತ ಪ್ರಯೋಗಿಸಿದ 3 ರಾಷ್ಟ್ರಗಳ ಶಸ್ತ್ರಾಸ್ತ್ರಗಳು ಎಷ್ಟು ಪವರ್‌ಫುಲ್?‌

Share This Article