ಒಂದಲ್ಲ ಎರಡಲ್ಲ ಮೂವರೊಟ್ಟಿಗೆ ಕಾಂಟ್ಯಾಕ್ಟ್‌ನಲ್ಲಿದ್ದ ಬ್ಯೂಟಿ – ಸ್ಟೇಷನ್‌ನಲ್ಲೇ ತಾಳಿ ಕಿತ್ತು ಗಂಡನ ಕೈಗಿಟ್ಟು ಹೋದ ಪತ್ನಿ

By
2 Min Read

– ರಾತ್ರಿ ಕ್ಯಾಬ್‌ ಡ್ರೈವಿಂಗ್‌ ಕೆಲಸಕ್ಕೆ ಹೋಗ್ತಿದ್ದ ಪತಿ
– ಇತ್ತ ಪ್ರಿಯಕರನೊಂದಿಗೆ ಚಕ್ಕಂದ ಆಡ್ತಿದ್ದ ಪತ್ನಿ

ಆನೇಕಲ್: 11 ವರ್ಷಗಳ ಪ್ರೀತಿ-ಮದ್ವೆ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಬಸವನಪುರ (Basavanapura) (ಬನ್ನೇರುಘಟ್ಟ ಸಮೀಪ) ಗ್ರಾಮದ ಬ್ಯೂಟಿಯ ಬಗ್ಗೆ ಇನ್ನಷ್ಟು ರಹಸ್ಯಗಳು ಬಯಲಾಗಿವೆ. ಮೂರು ಮಕ್ಕಳ ತಾಯಿಯಾಗಿದ್ದ ಈಕೆ ಒಂದಲ್ಲ ಎರಡಲ್ಲ ಮೂವರೊಟ್ಟಿಗೆ ಸಂಪರ್ಕದಲ್ಲಿದ್ದಳು ಅನ್ನೋದು ತಿಳಿದುಬಂದಿದೆ.

2 ವರ್ಷಗಳಿಂದ ಸತೋಷ್‌ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದ ಆಂಟಿ ಲೀಲಾವತಿ ಇನ್ನೊಬ್ಬಾತನೊಂದಿಗೂ ಸಂಪರ್ಕದಲ್ಲಿದ್ದಳು ಅನ್ನೋದಕ್ಕೆ ಫೋಟೋ ಸಾಕ್ಷ್ಯ ಸಿಕ್ಕಿದೆ. ಇದನ್ನೂ ಓದಿ: ಲವರ್‌ ಜೊತೆ ಮೂರು ಮಕ್ಕಳ ತಾಯಿ ಜೂಟ್‌ – ಇತ್ತ ಹೆಂಡ್ತಿ ಬೇಕೆಂದು ಗಂಡ ಕಣ್ಣೀರು

ಲವ್ವಿ ಡವ್ವಿ ಶುರುವಾಗಿದ್ದು ಹೇಗೆ?
ಬಸವನಪುರದಲ್ಲಿ ವಾಸವಿದ್ದ ಲೀಲಾವತಿ, ಮಂಜುನಾಥ್ ದಂಪತಿ 11 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದರು (Marriage). ಮಂಜುನಾಥ್‌ ಕ್ಯಾಬ್‌ ಡ್ರೈವರ್‌ ಆಗಿ ಕೆಲಸ ಮಾಡ್ತಿದ್ದ. ರಾತ್ರಿ ಕ್ಯಾಬ್‌ ಡ್ರೈವಿಂಗ್‌ ಕೆಲಸಕ್ಕೆ ಹೋಗ್ತಿದ್ದಂತೆ, ಸಂತೋಷ್‌ ಮನೆಗೆ ಬರುತ್ತಿದ್ದ. ಆಗ ಈಕೆ ಸಂತೋಷ್‌ ಜೊತೆಗೆ ಚಕ್ಕಂದ ಶುರು ಮಾಡಿಕೊಳ್ತಿದ್ಳು. ಇದನ್ನೂ ಓದಿ: ನನ್ನ ಹಣವನ್ನೆಲ್ಲ ತಿಂದು ತೇಗಿದ್ದೀಯಾ: ಡಿವೋರ್ಸ್‌ ವಿಚಾರಕ್ಕೆ ಪತ್ನಿಗೆ ಗುಂಡಿಟ್ಟು ಕೊಂದ ಪತಿ

ಕೆಲ ದಿನಗಳ ಬಳಿಕ ಲೀಲಾವತಿ ನಡವಳಿಕೆಯಿಂದ ಪತಿ ಮಂಜುನಾಥ್‌ ಅನುಮಾನಗೊಂಡಿದ್ದ. ಈಕೆ ಕಾಮದಾಟವನ್ನು ಬಯಲಿಗೆಳೆಯಬೇಕು ಅಂತ ಭಾನುವಾರ ಕೆಲಸಕ್ಕೆ ಹೋಗುವುದಾಗಿ ಹೇಳಿ, ಮನೆಯ ಸಮೀಪವೇ ಕಾರಿನಲ್ಲಿ ಕುಳಿತಿದ್ದ. ರಾತ್ರಿ ಲೀಲಾವತಿ ಫೋನ್‌ ಮಾಡಿ ಎಲ್ಲಿದ್ದೀಯಾ ಅಂತ ಕೇಳಿದಾಗ ಹೆಚ್‌ಎಎಲ್‌ ಬಳಿ ಇದ್ದೀನಿ ಅಂತ ಮಂಜುನಾಥ್‌ ಹೇಳಿದ್ದ. ಆಗ ಲೀಲಾವತಿ, ಸಂತೋಷ್‌ಗೆ ಫೋನ್‌ ಮಾಡಿ ಮನೆಗೆ ಕರೆಸಿಕೊಂಡು ಕಾಮದಾಟ ಶುರು ಮಾಡಿಕೊಂಡಿದ್ಳು. ಅಷ್ಟರಲ್ಲಿ ಮನೆಗೆ ಎಂಟ್ರಿ ಕೊಟ್ಟ ಪತಿ, ರೆಡ್‌ಹ್ಯಾಂಡಾಗಿ ಇಬ್ಬರನ್ನು ಹಿಡಿದಿದ್ದ. ಈ ವೇಳೆ ಜೋರು ಗಲಾಟೆಯೂ ನಡೆದಿತ್ತು. ಬಳಿಕ ಈ ಪ್ರಕರಣ ಬನ್ನೇರುಘಟ್ಟ ಪೊಲೀಸ್‌ ಠಾಣೆ ಮೆಟ್ಟಿಲೇರಿತ್ತು.

ಠಾಣೆಯಲ್ಲಿ ಪತಿ ಮನವೊಲಿಸಲು ಪ್ರಯತ್ನಿಸಿದ ಹೊರತಾಗಿಯೂ ವಿಫಲವಾಯಿತು. ತಾಳಿಯನ್ನ ಕಿತ್ತು ಮಂಜುನಾಥ್ ಕೈಗೆ ಕೊಟ್ಟವಳೇ ಪೊಲೀಸ್ ಠಾಣೆಯಿಂದ ನೇರವಾಗಿ ಸಂತೋಷ್ ಹೊರಟೇಬಿಟ್ಟಳು. ಇತ್ತ ಹೆಂಡ್ತಿ ಬೇಕೆಂದು ಪತಿ ಮಂಜುನಾಥ್ ಕಣ್ಣೀರು, ತಾಯಿ ಬೇಕೆಂದು ಮಕ್ಕಳು ಕಣ್ಣೀರಿಡುವಂತಾಗಿದೆ. ಇದನ್ನೂ ಓದಿ: ಮಹಿಳೆಯ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್‌

ಆ ದಿನ ಏನಾಯ್ತು?
ಬಸವನಪುರದಲ್ಲಿ ವಾಸವಿದ್ದ ಲೀಲಾವತಿ, ಮಂಜುನಾಥ್ ದಂಪತಿ 11 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದರು. ಮಂಜುನಾಥ್‌ ಕ್ಯಾಬ್‌ ಡ್ರೈವರ್‌ ಆಗಿ ಕೆಲಸ ಮಾಡ್ತಿದ್ದಾನೆ. ಕಳೆದ 2 ವರ್ಷಗಳ ಹಿಂದೆ ಲೀಲಾವತಿಗೆ ಪ್ರಿಯಕರ ಸಂತೋಷ್‌ನ ಪರಿಚಯವಾಗಿತ್ತು. ಇಬ್ಬರ ನಡುವೆ ಸಲುಗೆ ಹೆಚ್ಚಾಗಿ ಅಕ್ರಮ ಸಂಬಂಧ ಬೆಳೆದಿತ್ತು. ಸಾಕಷ್ಟು ಬಾರಿ ಮಂಜುನಾಥ್‌ ಇದನ್ನ ಪ್ರಶ್ನೆ ಮಾಡಿದ್ದ. ಆದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಎಸ್ಕೇಪ್‌ ಆಗಿದ್ದಳು.

Share This Article