ಸಿದ್ದರಾಮಯ್ಯ, ಎಚ್‍ಡಿಕೆ ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ: ಎಂಟಿಬಿ

Public TV
1 Min Read

ಆನೇಕಲ್: ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಭವಿಷ್ಯ ನುಡಿದಿದ್ದಾರೆ.

ಎಂಟಿಬಿ ನಾಗರಾಜು ಇಂದು ತಮ್ಮ ಪುತ್ರ ಬಿಬಿಎಂಪಿ ಸದಸ್ಯ ನಿತಿನ್ ಪುರುಷೋತಮ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡ ಶುಭಾಶಯ ತಿಳಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅಧಿಕಾರ ಸಿಗುತ್ತೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಅಧಿಕಾರಕ್ಕಾಗಿ ಏನ್ ಬೇಕಾದರೂ ಮಾಡುತ್ತಾರೆ. ಆದರೆ ಈ ಬಾರೀ ಸಿದ್ದರಾಮಯ್ಯ ತಿಪ್ಪರಲಾಗ ಹಾಕಿದರು ಅಧಿಕಾರ ಸಿಗಲ್ಲ. ಇನ್ನು ಮೂರುವರ್ಷ ಯಡಿಯೂರಪ್ಪ ಸರ್ಕಾರ ಸುಭದ್ರವಾಗಿರುತ್ತೆ ಎಂದರು. ಜೊತೆಗೆ ಆರ್. ಶಂಕರ್, ಎಚ್.ವಿಶ್ವನಾಥ್ ಹಾಗೂ ತಮ್ಮನ್ನ ಯಡಿಯೂರಪ್ಪ ಯಾವತ್ತೂ ಕೈ ಬಿಡುವುದಿಲ್ಲ. ನಮ್ಮನ್ನು ಇನ್ನು ಕೆಲವು ತಿಂಗಳಲ್ಲಿ ಸಚಿವರನಾಗಿ ಮಾಡುತ್ತಾರೆ. ಯಾರು ಏನೇ ಮಾಡಿದರೂ ಯಡಿಯೂರಪ್ಪ ಅಧಿಕಾರ ಪೂರ್ಣಗೊಳಿಸುತ್ತಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *