ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪಶು ಇಲಾಖೆಯ ಸಹಾಯಕ ನಿರ್ದೇಶಕನಿಗೆ ನೋಟಿಸ್

Public TV
1 Min Read

ಬೀದರ್: ಪಶು ಇಲಾಖೆಯಲ್ಲಿ ಫಲಾನುಭವಿಗಳಿಂದ ಲಂಚ ಸ್ವೀಕಾರ ಮಾಡುತ್ತಿದ್ದ ಸಹಾಯಕ ನಿರ್ದೇಶಕ ಓಂಕಾರ್ ಪಾಟೀಲ್ ಗೆ ನೋಟಿಸ್ ನೀಡಲಾಗಿದೆ.

ಬೀದರ್ ಪಶು ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಎಕ್ಸ್ ಕ್ಲೂಸೀವ್ ಸುದ್ದಿ ಬಿತ್ತರಿಸಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಪಶು ಇಲಾಖೆ, ಭ್ರಷ್ಟಾಚಾರದಲ್ಲಿ ತೊಡಗಿದ್ದ ಸಹಾಯಕ ನಿರ್ದೇಕನಿಗೆ ಕಾರಣ ಕೇಳಿ ನೋಟಿಸ್ ನೀಡಿದೆ.

ಪಶು ಇಲಾಖೆ ಉಪ ನಿರ್ದೇಶಕ ಗೌತಮ್ ಅರಳಿಯವರು ಭ್ರಷ್ಟ ಅಧಿಕಾರಿಗೆ ನೋಟಿಸ್ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಈಗಾಗಲೇ ನೋಟಿಸ್ ನೀಡಲಾಗಿದೆ. ಹೇಳಿಕೆ ಬಳಿಕ ಶಿಸ್ತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

2018-19 ಸಾಲಿನ ಹೈನುಗಾರಿಕೆ ಯೋಜನೆಯಲ್ಲಿ ವಿವಿಧ ಭಾಗ್ಯಗಳಿಗೆ ಆಯ್ಕೆಯಾದ ಫಲಾನುಭವಿಗಳಿಗೆ ಚೆಕ್ ನೀಡಲು ಪಶು ಇಲಾಖೆ ಸಹಾಯಕ ನಿರ್ದೇಶಕ ಓಂಕಾರ್ ಪಾಟೀಲ್ ಲಂಚ ಪೀಕುತಿದ್ದರು. ಪ್ರತಿಯೊಬ್ಬ ಫಲಾನುಭವಿಯಿಂದ 3 ರಿಂದ 5 ಸಾವಿರ ಲಂಚ ಬಾಚಿಕೊಳ್ಳುತ್ತಿದ್ದಾರೆ. ಯಾರು ಲಂಚ ನೀಡುವುದಿಲ್ಲವೋ ಅವರಿಗೆ ಚೆಕ್ ಕೊಡುತ್ತಿಲ್ಲ ಎಂದು ಸ್ಥಳೀಯ ನಿವಾಸಿ ವಿಶಾಲ್ ಹೋನ್ನಾ ಅವರು ಪಬ್ಲಿಕ್ ಟಿವಿ ಮುಂದೆ ದೂರಿದ್ದರು.

Share This Article
Leave a Comment

Leave a Reply

Your email address will not be published. Required fields are marked *