‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

Public TV
1 Min Read

ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಹೊರ ಹಾಕಿದ ನಂತರ ಅವರು ನೋವಿನಲ್ಲಿರುವುದನ್ನು ನಾನಾ ರೀತಿಯಲ್ಲಿ ತೋರಿಸಿಕೊಳ್ಳುತ್ತಿದ್ದಾರೆ. ದಿನವೂ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ಗುಡ್ ಮಾರ್ನಿಂಗ್ ಹೇಳುವಾಗ ಜೊತೆ ಜೊತೆಯಲಿ ಧಾರಾವಾಹಿಯ ಫೋಟೋಗಳನ್ನೇ ಬಳಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಆ ಧಾರಾವಾಹಿಯನ್ನು ಅವರು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಇದೀಗ ಅನಿರುದ್ಧ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಆಯಾ ದೇವಸ್ಥಾನಗಳ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಹಣೆಗೆ ಭಂಡಾರ ಹಚ್ಚಿದ್ದು ನೋಡಿದರೆ ಅವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಸಾಯಿಬಾಬಾ ಫೋಟೋ ಮುಂದಿರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಹೊರ ಬಂದ ನಂತರ ಸೀರಿಯಲ್ ನಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದು, ಅವೆಲ್ಲವನ್ನೂ ಸಸ್ಪೆನ್ಸ್ ಆಗಿಯೇ ಇಡುತ್ತಿದೆ ತಂಡ. ಅನಿರುದ್ಧ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರದ ಬದಲು ಹೊಸದೊಂದು ಪಾತ್ರ ತರಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಆ ಪಾತ್ರವನ್ನು ಹರೀಶ್ ರಾಜ್ ಮಾಡಲಿದ್ದಾರಂತೆ. ಆದರೆ, ಆರ್ಯವರ್ಧನ್ ಪಾತ್ರವನ್ನು ಸದ್ಯಕ್ಕೆ ಯಾರೂ ಮಾಡುವುದಿಲ್ಲ ಎನ್ನಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *