ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಅಣ್ಣಾ ಹಜಾರೆ

Public TV
1 Min Read

– ಲೋಕಪಾಲ್ ಜಾರಿಗೆ ಒತ್ತಾಯಿಸಿ ಮತ್ತೆ ಹೋರಾಟ ಆರಂಭ

ಮುಂಬೈ: ಲೋಕಪಾಲ್ ಜಾರಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ಮಹಾತ್ಮಗಾಂಧಿ ಹುತ್ಮಾತಗೊಂಡ ದಿನವಾದ ಇಂದು ಅಣ್ಣಾ ಹಜಾರೆ ಅವರು, ಸ್ವಗ್ರಾಮ ಮಹಾರಾಷ್ಟ್ರದ ರಾಲೆಗನ್ ಸಿದ್ಧಿಯಲ್ಲಿ ಹೋರಾಟ ಆರಂಭಿಸಿದ್ದಾರೆ. ಕೇಂದ್ರದಲ್ಲಿ ಲೋಕಪಾಲ್ ಮತ್ತು ರಾಜ್ಯದಲ್ಲಿ ಲೋಕಾಯುಕ್ತ ಜಾರಿಗೆ ತರಬೇಕು ಎಂದು ಅಣ್ಣಾ ಹಜಾರೆ ಒತ್ತಾಯಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಭರವಸೆ ಮೇಲೆ ಡಿಸೆಂಬರ್ 2018ರಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರವನ್ನು ಹಿಂಪಡೆದಿದ್ದೆ. ಆದರೆ ಇಲ್ಲಿಯವರೆಗೂ ಲೋಕಪಾಲ್ ಜಾರಿಗೆ ಬಂದಿಲ್ಲ. ಹೀಗಾಗಿ ಜನವರಿ 28ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಲೋಕಪಾಲ್ ಜಾರಿಗೆ ಒತ್ತಾಯಿಸಿ 9 ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸ್ವಗ್ರಾಮ ರಾಲೆಗನ್ ಸಿದ್ಧಿಯಲ್ಲಿ ಹೋರಾಟಕ್ಕೆ ಮುಂದಾಗಿರುವೆ ಅಂತ ತಿಳಿಸಿರುವೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ನಮ್ಮ ಹೋರಾಟ ಆರಂಭವಾಗಿ 5 ವರ್ಷ ಕಳೆದರೂ ಕೇಂದ್ರದಲ್ಲಿ ಲೋಕಪಾಲ್ ಜಾರಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಲೋಕಪಾಲರನ್ನು ನೇಮಕ ಮಾಡಿಲ್ಲ. ಅಷ್ಟೇ ಅಲ್ಲದೆ ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಕಾಯ್ದೆ ಜಾರಿಯಾಗಿಲ್ಲ ಎಂದು ಆರೋಪಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *