ನಿಮಗೆ ಅಧಿಕಾರದ ಅಮಲೇರಿದೆ: ಕೇಜ್ರಿವಾಲ್‍ಗೆ ಅಣ್ಣಾ ಹಜಾರೆ ಪತ್ರ

Public TV
2 Min Read

ನವದೆಹಲಿ: ಮದ್ಯದಂತೆಯೇ ಅಧಿಕಾರ ಕೂಡ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲೇರಿದ ಹಾಗೆ ತೋರುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕಿಡಿಕಾರಿದರು.

ಭ್ರಷ್ಟಾಚಾರ ಪ್ರಕರಣದ ನಂತರ ಸರ್ಕಾರ ಜಾರಿಗೆ ತಂದ ಸರ್ಕಾರಿ ಮದ್ಯದ ಪರವಾನಗಿ ನೀತಿಯ ಕುರಿತು ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?: ನೀವು ಮುಖ್ಯಮಂತ್ರಿಯಾದ ನಂತರ ನಾನು ನಿಮಗೆ ಮೊದಲ ಬಾರಿಗೆ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಸರ್ಕಾರದ ಮದ್ಯ ನೀತಿಯ ಬಗ್ಗೆ ಇತ್ತೀಚೆಗೆ ವರದಿಗಳಿಂದ ನೋವಾಗಿದೆ ಎಂದು ತಿಳಿಸಿದ್ದಾರೆ.

ನೀವು ಬರೆದಿರುವ ಪುಸ್ತಕದಲ್ಲಿ ಪ್ರದೇಶದ ನಿವಾಸಿಗಳ ಅನುಮೋದನೆಯಿಲ್ಲದೇ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯಬಾರದು ಎಂದು ತಿಳಿಸಿದ್ದೀರಿ. ಆದರೆ ಇದೀಗ ನೀವು ಮುಖ್ಯಮಂತ್ರಿಯಾದ ನಂತರ ಈ ಎಲ್ಲಾ ಆದರ್ಶಗಳನ್ನು ಮರೆತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೋದಿ, ಬಿಜೆಪಿಯವರು ಸೇರಿ ದೇಶವನ್ನ ಬರ್ಬಾದು ಮಾಡಿಬಿಟ್ರು – ಸಿದ್ದು ಗುದ್ದು

ನೀವು, ಮನೀಶ್ ಸಿಸೋಡಿಯಾ ಹಾಗೂ ಇತರರು ರಚಿಸಿದ ಆಮ್ ಆದ್ಮಿ ಪಕ್ಷವು ಈಗ ಯಾವುದೇ ಪಕ್ಷಕ್ಕಿಂತ ಭಿನ್ನವಾಗಿಲ್ಲ. ಸದೃಢವಾದ ಲೋಕಪಾಲ್ ಮತ್ತು ಭ್ರಷ್ಟಾಚಾರ-ವಿರೋಧಿ ಕಾನೂನುಗಳನ್ನು ತರುವ ಬದಲು, ನೀವು ಈ ಮದ್ಯದ ನೀತಿಯನ್ನು ತಂದಿದ್ದೀರಿ. ಅದು ಜನವಿರೋಧಿ, ವಿಶೇಷವಾಗಿ ಮಹಿಳಾ ವಿರೋಧಿಯಾಗಿದೆ ಎಂದು ತಿಳಿಸಿದರು.

ದೆಹಲಿ ಸರ್ಕಾರದ ಅಬಕಾರಿ ಖಾತೆಯನ್ನು ನಿರ್ವಹಿಸುತ್ತಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಎಫ್‍ಐಆರ್‍ನಲ್ಲಿ ಹೆಸರಿಸಲಾದ 15 ಆರೋಪಿಗಳಲ್ಲಿ ಒಬ್ಬರಾಗಿದ್ದರು. ಇದನ್ನೂ ಓದಿ: ಯಥಾಸ್ಥಿತಿ ಕಾಪಾಡಿ – ಈದ್ಗಾ ಮೈದಾನದಲ್ಲಿ ಗಣೋಶೋತ್ಸವ ಆಚರಣೆ ಇಲ್ಲ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *