ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್‍ಗಿರಿ – ಆಟೋ ಚಾಲಕನಿಗೆ ಥಳಿಸಿದ ದುಷ್ಕರ್ಮಿಗಳು

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನೈತಿಕ ಪೊಲೀಸ್‍ಗಿರಿ ಪ್ರಕರಣ ಮುಂದುವರೆದಿದ್ದು ಧರ್ಮಸ್ಥಳ (Dharmasthala) ಬಸ್ ನಿಲ್ದಾಣ ಬಳಿ ಮುಸ್ಲಿಂ ಯುವಕನಿಗೆ ಹಿಂದೂ ಯುವಕರ ಗುಂಪೊಂದು ಹಲ್ಲೆ ನಡೆಸಿದೆ.

ಬೆಳ್ತಂಗಡಿಯ ಉಜಿರೆಯ ಮೊಹಮ್ಮದ್ ಆಶಿಕ್ (22) ಹಲ್ಲೆಗೊಳಗಾದ ಯುವಕ. ಆಶಿಕ್ ಆಟೋ ಚಾಲಕನಾಗಿದ್ದು, ಬುಧವಾರ ರಾತ್ರಿ 9 ಗಂಟೆಗೆ ಉಜಿರೆ ಆಟೋ ನಿಲ್ದಾಣದಲ್ಲಿದ್ದಾಗ ಎಸ್‍ಡಿಎಂ ಕಾಲೇಜಿನ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತನ ಆಟೋ ಹತ್ತಿದ್ದಳು. ಯುವತಿ ಧರ್ಮಸ್ಥಳದಿಂದ ಬೆಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಸಂಚರಿಸಲು ಧರ್ಮಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಳು. ಬಳಿಕ ಯುವತಿಯನ್ನು ಕರೆತಂದ ಆಶಿಕ್ ಬಸ್ ನಿಲ್ದಾಣದ ಬಳಿ ಆಟೋ ನಿಲ್ಲಿಸಿ ಲಗೇಜ್ ಇಳಿಸುತ್ತಿದ್ದ. ಈ ವೇಳೆ ನಾಲ್ಕು ಬೈಕ್‍ನಲ್ಲಿ ಬಂದ ಹಿಂದೂ ಯುವಕರ ಗುಂಪು ಆಶಿಕ್‍ನನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

ಬಳಿಕ ಹಿಂದೂ ಯುವತಿಯನ್ನು ಈ ರಾತ್ರಿಯಲ್ಲಿ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಂದ ಯುವಕರು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಆಶಿಕ್‍ನನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಗ್ಗೆ ಆಶಿಕ್‍ಗೆ ಮಾಹಿತಿ ಇಲ್ಲ ಎನ್ನಲಾಗಿದೆ. ಪೊಲೀಸರು (Police) ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ನೀರಿನ ಟ್ಯಾಂಕ್ ಬಿದ್ದು ಇಬ್ಬರು ಸಾವು, ಇಬ್ಬರ ಸ್ಥಿತಿ ಚಿಂತಾಜನಕ

Web Stories

Share This Article
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ