ಸರ್ಕಾರಿ ಶಾಲೆಯಲ್ಲಿ ಕರಾಟೆ ತರಬೇತಿ ಪ್ರಾರಂಭಿಸಲು ಸಚಿವರಿಗೆ ಮನವಿ

Public TV
1 Min Read

ಬಳ್ಳಾರಿ/ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕರಾಟೆ ತರಬೇತಿ ಪುನರಾರಂಭಿಸಬೇಕೆಂದು ಹಿರಿಯ ಕರಾಟೆ ತರಬೇತುದಾರರು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿಂದು ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಕರಾಟೆ ಹಿರಿಯ ತರಬೇತುದಾರರ ನಿಯೋಗ, ಪ್ರೌಢ ಶಾಲೆಗಳ ವಿದ್ಯಾರ್ಥಿನಿಯರಲ್ಲಿ ಆತ್ಮರಕ್ಷಣೆ ಹೆಚ್ಚಿಸುವ ಸಲುವಾಗಿ ಈ ಕರಾಟೆ ತರಬೇತಿ ಮುಖ್ಯವಾಗಿದೆ. ಹೀಗಾಗಿ ಕರಾಟೆ ತರಬೇತಿ ಪುನರಾರಂಭಿಸಬೇಕೆಂದು ಸಚಿವರಲ್ಲಿ ಕೋರಿದ್ದಾರೆ.

ಹಿರಿಯ ತರಬೇತುದಾರರ ಮನವಿಯನ್ನು ಆಲಿಸಿದ ಸಚಿವ ಸುರೇಶ್ ಕುಮಾರ್, ಕರಾಟೆ ತರಬೇತಿ ಪುನರಾರಂಭಿಸಲು ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಬಳ್ಳಾರಿಯ ಹಿರಿಯ ತರಬೇತುದಾರರಾದ ಕಟ್ಟೇಸ್ವಾಮಿ, ಸುಭಾಷ್ ಚಂದ್ರ, ಕೊಪ್ಪಳದ ಹಿರಿಯ ತರಬೇತುದಾರ ಮೌನೇಶ ವಡ್ಡಟಿ, ವಿಜಯಪುರದ ಹಿರಿಯ ತರಬೇತುದಾರ ಶಿವಕುಮಾರ ಶಾರದಳ್ಳಿ ಸೇರಿದಂತೆ ಅನೇಕರು ಸಚಿವರಿಗೆ ಈ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *