ಅರಬ್ಬೀ ಸಮುದ್ರದ ನೀರಿನ ಬಣ್ಣ ಬದಲು- ಸ್ಥಳೀಯರಲ್ಲಿ ಆತಂಕ

Public TV
1 Min Read

– ಸಿಡಿಲಿನ ಹೊಡೆತಕ್ಕೆ ಉಡುಪಿಯಲ್ಲಿ ಮಹಿಳೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಮೆಕ್ನೂ ಚಂಡಮಾರುತ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಸಮುದ್ರದ ನೀರು ಬಣ್ಣ ಬದಲಾಯಿಸಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ಕಾರ್ಕಳದಲ್ಲಿ ಸಿಡಿಲಿನ ಹೊಡೆತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಗಲ್ಫ್ ರಾಷ್ಟ್ರಗಳನ್ನು ಬೆಚ್ಚಿಬೀಳಿಸಿರುವ ಚಂಡಮಾರುತ, ಈಗ ಕರ್ನಾಟಕ ಕರಾವಳಿಯನ್ನು ನಡುಗಿಸುತ್ತಿದೆ. ಕಡಲ ಅಬ್ಬರ ತೀರದಿಂದ ಅರ್ಧ ಕಿ.ಮೀ ದೂರದಿಂದಲೇ ಮೇಲೇರಿ ಬರುತ್ತಿದೆ. ಕಡಲಿನ ಅಬ್ಬರ ಕಂಡು ಕರಾವಳಿಗರಲ್ಲಿ ಆತಂಕ ಸೃಷ್ಟಿಯಾಗಿದೆ. ಕಾಪು, ಮಲ್ಪೆ, ಮರವಂತೆ, ಪಡುಬಿದ್ರೆ ಬೀಚ್ ಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.

ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ನಡೆದಿದೆ. ಮಲಗಿದಲ್ಲೇ 34 ವರ್ಷದ ಶೀಲಾ ನಲ್ಕೆ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಭಾರೀ ಗುಡುಗು ಸಹಿತ ಮಳೆಯಾಗಿತ್ತು. ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದ ಶೀಲಾ, ಮನೆಯೊಳಗೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಸುನೀಲ್ ಕುಮಾರ್ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *