ಸಿದ್ದರಾಮಯ್ಯ ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತ್ತಾರೆ – ಅರಗ ಜ್ಞಾನೇಂದ್ರ

Public TV
1 Min Read

– ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮಗ ಅರ್ಹತೆ ಇಲ್ಲದೇ ರಾಜಕೀಯಕ್ಕೆ ಬಂದುಬಿಡುತ್ತಾರೆ

ಕಾರವಾರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮಗ ಅರ್ಹತೆ ಇಲ್ಲದೇ ರಾಜಕೀಯಕ್ಕೆ ಬಂದುಬಿಡುತ್ತಾರೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ಎಷ್ಟು ಕೆಳಮಟ್ಟದಲ್ಲಿ ಮಾತನಾಡಿದರೆ, ಅಷ್ಟು ವೋಟು ಸಿಗುತ್ತದೆ ಎಂದು ಭಾವಿಸಿದ್ದಾರೆ. ಇದು ಅವರ ಭ್ರಮೆ ಅಷ್ಟೇ. ಸಿದ್ದರಾಮಯ್ಯ ಅವರು ಮೈನಾರಿಟಿ ವೋಟಿಗಾಗಿ ಜೊಲ್ಲು ಸುರಿಸುತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಬೆತ್ತಲಾಗಿ ಕಳ್ಳತನ – ಅಂತರಾಜ್ಯ ಕಳ್ಳ ದಂಪತಿ ಅರೆಸ್ಟ್

ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿದೆ ಎನ್ನುತ್ತಾರೆ. ಕಾಂಗ್ರೆಸ್ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಅವರ ಮಗನಂತೆ ಯಾವುದೇ ಯೋಗ್ಯತೆ, ಅರ್ಹತೆ ಇಲ್ಲದೇ ರಾಜಕೀಯಕ್ಕೆ ಬಂದು ಬಿಡುತ್ತಾರೆ. ಬಿಜೆಪಿಯಲ್ಲಿ ಅರ್ಹತೆ, ಯೋಗ್ಯತೆ ಇರುವವರು, ಒಬ್ಬರ ಮಗ ಎಂದು ಮೂಲೆಗೆ ಹಾಕಲಾಗುವುದಿಲ್ಲ. ಯಾರಿಗೆ ಸೇವಾ ಮನೋಭಾವನೆ, ಅರ್ಹತೆ ಇರುತ್ತದೆಯೋ ಅವರು ಮೂಲೆಗೆ ಹೋಗಬಾರದು ಎಂದು ತಿಳಿಸಿದರು.

ಯಾರಿಗೆ ಸೈದ್ಧಾಂತಿಕವಾಗಿ ಪಕ್ಷ ಕಟ್ಟಲು ಯೋಗ್ಯತೆ ಇಲ್ಲವೋ ಅವರು ಜಾತಿಯನ್ನು ಬಂಡವಾಳ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್, ಜೆಡಿಎಸ್ ಜಾತಿವಾದ ಮಾಡುತ್ತಿದೆ. ಜನ ಅವರನ್ನು ತಿರಸ್ಕಾರ ಮಾಡುತ್ತಾರೆ. ಇವರ ಉದ್ದಾರಕ್ಕಾಗಿ ಜಾತಿಯನ್ನು ಮೇಲೆ ಎಬ್ಬಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ದಸರಾದಲ್ಲಿ ಪೊಲೀಸರು ಕೇಸರಿ ಬಣ್ಣದ ವಸ್ತ್ರ ಧರಿಸಿದಕ್ಕೆ ಆಕ್ಷೇಪ ತೆಗೆದಿದ್ದಾರೆ. ದೇಶದಲ್ಲಿ ಕೇಸರಿ ಬ್ಯಾನ್ ಆಗಿದೆಯಾ? ಕೇಸರಿ ಬಣ್ಣ ಪಕ್ಷಕ್ಕೆ ಸೀಮಿತವಾಗಿದೆಯಾ? ಎಂದು ಪ್ರಶ್ನೆ ಮಾಡಿದ ಅವರು, ನಾಳೆ ರಾಷ್ಟ್ರಧ್ವಜದ ಕೇಸರಿ ಬಣ್ಣ ತೆಗೆದು ಹಸಿರು ಬಣ್ಣ ಇದ್ರೆ ಸಾಕು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಯುವತಿಯ ಹೊಟ್ಟೆಯಲ್ಲಿ ಒಂದೂವರೆ ಕೆಜಿ ಕೂದಲು – ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

Share This Article
Leave a Comment

Leave a Reply

Your email address will not be published. Required fields are marked *