ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ: ಅರವಿಂದ್ ಬೆಲ್ಲದ್

By
1 Min Read

ಧಾರವಾಡ: ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲಿಬಾನ್ ಸಮಸ್ಯೆಯಿಂದಾಗಿ ಬೆಲೆ ಏರಿಕೆಯಾಗಿವೆ. ಅಲ್ಲದೇ ಕಚ್ಚಾ ತೈಲ ಬರುತ್ತಿಲ್ಲ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ ಮತ್ತು ಗ್ಯಾಸ್ ದರ ಹೆಚ್ಚಳ ಯಾಕೆ ಆಗಿದೆ ಎಂದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಒಳ್ಳೆಯ ಸಂಗತಿ: ಶೆಟ್ಟರ್

ಇದೇ ವೇಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ನಾವೇ ಗೆಲ್ಲಲಿದ್ದೇವೆ. ಜನ ಅಭಿವೃದ್ಧಿ ನೋಡಿ ಮತ ಹಾಕುತ್ತಾರೆ. ಹೀಗಾಗಿ ನಾವು ಪಾಲಿಕೆ ಚುನಾವಣೆಯಲ್ಲಿ 55 ರಿಂದ 60 ಸೀಟು ಗೆಲ್ಲುತ್ತೇವೆ. ಈ ಬಾರಿ ಪಾಲಿಕೆಯಲ್ಲಿ ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *