ದೇವದುರ್ಗ ಉಪಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಬಂಧನ

Public TV
1 Min Read

ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ಉಪಕಾರಾಗೃಹ ಗೋಡೆ ಹಾರಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು (Under Trial Prisoner) ಪೊಲೀಸರು ಬಂಧಿಸಿದ್ದಾರೆ.

ಕೊಲೆಪ್ರಕರಣದ ಮೇಲೆ ಜೈಲು ಸೇರಿದ್ದ ಆರೋಪಿ ಅನ್ವರ್ ಬಾಷಾ ಸೆಪ್ಟೆಂಬರ್ 3 ರಂದು ಉಪ ಕಾರಾಗೃಹದಿಂದ ಪರಾರಿಯಾಗಿದ್ದ. ನ್ಯಾಯಾಲಯಕ್ಕೆ ಪ್ರಕರಣ ವಿಚಾರಣೆ ವೇಳೆ ಹಾಜರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನ್ಯಾಯಾಲಯಕ್ಕೆ ಬರುವ ಸಾಧ್ಯತೆ ಹಿನ್ನೆಲೆ ಕಣ್ಣಿಟ್ಟಿದ್ದ ಪೊಲೀಸರು ನ್ಯಾಯಾಧೀಶರ ಅನುಮತಿ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮೂವರ ಬಂಧನ

ಅನ್ವರ್ ಬಾಷಾ ದೇವದುರ್ಗದ ಮಸಿಹಾಳ ಗ್ರಾಮದ ಲಾಲಾ ಸಾಬ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾನೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ಈಗ ಪುನಃ ಜೈಲು ಸೇರಿದ್ದಾನೆ. ಇದನ್ನೂ ಓದಿ: ಬೈಕ್‍ಗೆ ಅಂಬುಲೆನ್ಸ್ ಡಿಕ್ಕಿ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್