Breaking- ಬಂಧಿತನಾಗಿದ್ದ ನಟ ಚೇತನ್ ಗೆ ಜಾಮೀನು

Public TV
2 Min Read

ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ನಟ ಚೇತನ್ ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.  ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಅವರು ಆದೇಶಿಸಿದ್ದಾರೆ. ಶಿವಕುಮಾರ್ ನೀಡಿದ್ದ ದೂರಿನ ಮೇಲೆ ಚೇತನ್ ಬಂಧನವಾಗಿತ್ತು.

ಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಎರಡು ದಿನಗಳ ಹಿಂದೆ ನಟ ಚೇತನ್ ನನ್ನು (Chetan) ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಅವರನ್ನು ಕೋರ್ಟಿಗೂ ಹಾಜರುಪಡಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು  ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.  ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾನ್ಯ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತ್ತು. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಚೇತನ್ ಅವರು ಉರಿಗೌಡ (Urigowda), ನಂಜೇಗೌಡ (Nanjegowda) ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ (Shivakumar) ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *