ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ

Public TV
1 Min Read

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ತಮಿಳುನಾಡು (Tamil Nadu) ಸಚಿವ ವಿ ಸೆಂಥಿಲ್ ಬಾಲಾಜಿ  (V.Senthil Balaji) ಅವರನ್ನು ಆ.25 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ (Court) ಆದೇಶ ಹೊರಡಿಸಿದೆ.

ಸೆಂಥಿಲ್ ಬಾಲಾಜಿ ಅವರ ಕಸ್ಟಡಿ ಅವಧಿ ಮುಗಿದ ಬಳಿಕ ಜಾರಿ ನಿರ್ದೇಶನಾಲಯ (Enforcement Directorate) ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ. ಇದನ್ನೂ ಓದಿ: ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸೆಂಥಿಲ್ ಬಾಲಾಜಿಯನ್ನು 5 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಆಗಸ್ಟ್ 7 ರಂದು ಇ.ಡಿಗೆ ಅನುಮತಿ ನೀಡಿದ್ದರು. ಕಸ್ಟಡಿ ಅವಧಿ ಶನಿವಾರ ಅಂತ್ಯಗೊಂಡಿದ್ದರಿಂದ ಇ.ಡಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು.

ಹಿಂದಿನ ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದಾಗಿನ ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ಅವರನ್ನು ಜೂ.14 ರಂದು ಬಂಧಿಸಲಾಗಿತ್ತು. ಇದನ್ನೂ ಓದಿ: 7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್