ಜಮ್ಮು ಕಾಶ್ಮೀರದಲ್ಲಿ ಜನ ಜೀವನ ಆರಂಭ – 1 ಸಾವು, 6 ಮಂದಿಯ ಮೇಲೆ ಗುಂಡೇಟು

Public TV
1 Min Read

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಜನ ಜೀವನ ಆರಂಭಗೊಂಡಿದ್ದು, ಸಾರ್ವಜನಿಕರು ಎಂದಿನ ಕಾರ್ಯಕ್ಕೆ ತೆರಳುತ್ತಿದ್ದಾರೆ.

ಈ ವೇಳೆ ನಿಷೇಧಾಜ್ಞೆ ಇದ್ದರೂ ಶ್ರೀನಗರದಲ್ಲಿ ಪ್ರತಿಭಟನೆಗೆ ಇಳಿದ 100 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಓಡಿ ಹೋಗುತ್ತಿದ್ದ ಓರ್ವ ಪ್ರತಿಭಟನಾಕಾರನನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಈ ವೇಳೆ ಆತ ಝೆಲಂ ನದಿಗೆ ಕಟ್ಟಲಾಗಿದ್ದ ಸೇತುವೆಯಿಂದ ಹಾರಿ ಮೃತಪಟ್ಟಿದ್ದಾನೆ ಎಂದು ಮಾಧ್ಯಮ ವರದಿ ಮಾಡಿದೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ 6 ಮಂದಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಶ್ಮೀರದಲ್ಲಿ ಕೇಬಲ್ ಸೇವೆ ಎಲ್ಲ ಸ್ಥಗಿತಗೊಂಡಿದ್ದು ಡಿಶ್ ಟಿವಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಇಂಟರ್ ನೆಟ್, ಮೊಬೈಲ್, ದೂರವಾಣಿ ಸಂಪರ್ಕ ಎಲ್ಲವೂ ಕಡಿತಗೊಂಡಿದೆ. ಸಂವಹನಕ್ಕಾಗಿ ಅಧಿಕಾರಿಗಳಿಗೆ ಸ್ಯಾಟಲೈಟ್ ಫೋನ್ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *