ಇಸ್ಲಾಮಾಬಾದ್: ಭಾರತದ ಆಪರೇಷನ್ ಸಿಂಧೂರ (Operation Sindoor) ದಾಳಿ ವೇಳೆ `ದೇವರ ದಯೆ’ ಯಿಂದ ಬದುಕುಳಿದಿದ್ದೇವೆ ಎಂದು ಪಾಕಿಸ್ತಾನದ ರಕ್ಷಣಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್(Asim Munir) ಹೇಳಿದ್ದಾನೆ.
ಇಸ್ಲಾಮಾಬಾದ್ನಲ್ಲಿ ನಡೆದ ರಾಷ್ಟ್ರೀಯ ಉಲೇಮಾ ಸಮಾವೇಶದಲ್ಲಿ ಮಾತನಾಡಿ, ಮೇ ತಿಂಗಳಲ್ಲಿ ನಡೆದ 4 ದಿನಗಳ ಮೇ ಸಂಘರ್ಷದ ವೇಳೆ ಪಾಕ್ ಸಶಸ್ತ್ರ ಪಡೆಗಳಿಗೆ ದೇವರ ನೆರವು ಸಿಕ್ಕಿತು. ನನಗೂ ಹಾಗೆ ಅನಿಸುತ್ತಿದೆ ಎಂದಿದ್ದಾನೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು
“It was ‘divine intervention’ that helped the country during the May conflict with India… we felt it”, says Pakistan Field Marshal Asim Munir pic.twitter.com/IkwUHM6R9E
— The Armoury Brief (@TheArmouryBrief) December 21, 2025
ಈ ಸಮಾವೇಶದಲ್ಲಿ ಮಾತಾಡಿರುವ ಆಸಿಮ್, ಅಫ್ಘಾನಿಸ್ತಾನದ ಗಡಿಯಾದ್ಯಂತ ಒಳನುಸುಳುವ ಉಗ್ರರಲ್ಲಿ ಆಫ್ಘಾನ್ ಪ್ರಜೆಗಳೇ ಹೆಚ್ಚಾಗಿದ್ದಾರೆ. ಪಾಕಿಸ್ತಾನ ಮತ್ತು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ತಾಲಿಬಾನ್ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ ಟೂರಿಸ್ಟ್ ಪಾರ್ಟಿ, ನಾಯಕರಿಗೆ ಅಹಂಕಾರ ಬಂದಿದೆ: ಶಿವಸೇನೆ ಉದ್ಧವ್ ಬಣ ಟೀಕೆ
26 ನಾಗರಿಕರನ್ನು ಹತ್ಯೆಗೈದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7 ರಂದು ಪಾಕಿಸ್ತಾನದ ಸೇನಾ ನೆಲೆ ಮತ್ತು ಉಗ್ರರ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು.

