ರಾಜೀನಾಮೆ ನೀಡದಂತೆ ರಾಹುಲ್‍ಗೆ ಸಿಎಂ ಎಚ್‍ಡಿಕೆ ಮನವಿ

Public TV
1 Min Read

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋತು ತೀವ್ರ ನಿರಾಸೆ ಅನುಭವಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ಮಾಡಿದರು.

ನವದೆಹಲಿಯ ತುಘಲಕ್ ಲೇನ್‍ನಲ್ಲಿ ಇರುವ ರಾಹುಲ್ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ಕುಮಾರಸ್ವಾಮಿ ಸುಮಾರು 20 ನಿಮಿಷಗಳ ಕಾಲ ರಾಹುಲ್ ಜೊತೆ ಚರ್ಚೆ ನಡೆಸಿದರು. ಇದೇ ವೇಳೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವೊಲಿಸುವ ಪ್ರಯತ್ನ ನಡೆಸಿದರು. ಅಲ್ಲದೇ ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿ ಮಾತುಕತೆ ನಡೆಸಿದರು.

ರಾಹುಲ್ ಭೇಟಿ ಬಳಿಕ ಸಿಎಂ ಕುಮಾರಸ್ವಾಮಿ ಅವರು ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವದಲ್ಲಿ ಭಾಗವಹಿಸಲಿದ್ದು, ಸಂಜೆ ಏಳು ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿಯೇ ಸಿಎಂ ಕುಮಾರಸ್ವಾಮಿ ಅವರು ದೆಹಲಿಗೆ ಆಗಮಿಸಿದ್ದರು.

ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರೆ. ಇತ್ತ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್ ವಿಶ್ವನಾಥ್ ಅವರು ಮೋದಿರನ್ನ ಹಾಡಿಹೊಗಳಿದ್ದರು. ಭಾರತದ ಎಲ್ಲಾ ಜಾತಿ ಜನಾಂಗ ಧರ್ಮ ಭಾಷಿಕರಣ ಆಶಯಗಳಂತೆ ಒಂದಾಗಿ ಎಲ್ಲರ ಭವಿಷ್ಯದ ಬಲ ಭೀಮನಾಗಿ ಪ್ರಧಾನಿ ಮೋದಿಯವರು ಹೆಜ್ಜೆ ಹಾಕಲಿ ಎಂದು ಆಶಿಸುತ್ತೇನೆ. ಜಾಗತಿಕ ಜಗತ್ತಿನ ಅತ್ಯಂತ ಎತ್ತರದ ಜನತಂತ್ರ ವ್ಯವಸ್ಥೆಯನ್ನ ಒಪ್ಪಿ ಅಪ್ಪಿ ಆಡಳಿತ ನಡಿಸುತ್ತಿರುವ 71 ವರ್ಷಗಳ ಕಾಲದಿಂದಲೂ ಸ್ವಂತಂತ್ರವನ್ನು ಸಂರಕ್ಷಿಸಿ ಮುನ್ನುಗುತ್ತಿರುವ ಭಾರತದ ಪ್ರಧಾನಮಂತ್ರಿಯಾಗಿ 2ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡುತ್ತಿರುವ ನಿಮಗೆ ಭಾರತದ ಸಮಸ್ತ ಜನಕೋಟಿಯ ಶುಭಾಶಯದ ಶುಭಕಾಮನೆಗಳು ಎಂದು ಬರೆದು ಟ್ವೀಟ್ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *