ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ – ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭ

Public TV
1 Min Read
BLG SWAMIJI

ಬೆಳಗಾವಿ: ಚಳಿಗಾಲದ ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ ತಟ್ಟಲಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಶುರುವಾಗಿದೆ.

ನಗರದ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ಹತ್ತು ದಿನಗಳ ಒಳಗೆ 10 ಇಲಾಖೆ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡಬೇಕು. ಇಲ್ಲವಾದರೆ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಎಳಲಿದೆ. ಉತ್ತರ ಕರ್ನಾಟಕದ ಯಾವ ಶಾಸಕರು ಅಧಿವೇಶನಕ್ಕೆ ಗೈರಾಗಬಾರದು. ಪಕ್ಷಭೇದ ಮರೆತು ಎಲ್ಲರೂ ಉತ್ತರ ಕರ್ನಾಟಕ ಅಭಿವೃದ್ಧಿಗೆ ಧ್ವನಿಯಾಗಬೇಕು ಎಂದು ಹೇಳಿದರು.

BLG

ಇದೇ ವೇಳೆ ಉತ್ತರ ಕರ್ನಾಟಕ ಹೋರಾಟ ಅಭಿವೃದ್ಧಿ ಪರ ಧ್ವನಿ ಎತ್ತುವಂತೆ ಎಲ್ಲ ಶಾಸಕರಿಗೂ ಪತ್ರ ಬರೆಯುವುದರಾಗಿ ಹೇಳಿದರು. ಅಲ್ಲದೇ ಹತ್ತು ದಿನಗಳ ಒಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟಕ್ಕೆ ಸಿದ್ಧವಾಗುತ್ತೇವೆ. ಒಂದೊಮ್ಮೆ ಸರ್ಕಾರ ನಮ್ಮ ಬೇಡಿಕೆ ನಿರ್ಲಕ್ಷಿಸಿದರೆ ಹೋರಾಟಗಾರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿತ್ತೇವೆ. ಅಲ್ಲದೇ ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ ಮಾಡಲು ಎಲ್ಲಾ ಸ್ವಾಮೀಜಿಗಳ ಬೆಂಬಲವಿದ್ದು, ಪ್ರತ್ಯೇಕ ರಾಜ್ಯ ಹೋರಾಟ ತೀವ್ರಗೊಂಡರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಆಗುತ್ತದೆ ಎಚ್ಚರಿಕೆ ನೀಡಿದರು.

ಹೋರಾಟಗಾರರ ನಿರ್ಣಯಗಳು:
1. ಬೆಳಗಾವಿ 2ನೇ ರಾಜಧಾನಿಯಾಗಿ ಘೋಷಣೆ, ಕನ್ನಡ ಸೌಧಕ್ಕೆ ಕಚೇರಿಗಳ ಸ್ಥಳಾಂತರ.
2. 10 ದಿನ ಬದಲಿಗೆ 21 ದಿನ ಅಧಿವೇಶನ ನಡೆಯಬೇಕು.
3. ಬೇಡಿಕೆಗಳ ಕುರಿತು ಸ್ವಾಮೀಜಿಗಳು, ಹೋರಾಟಗಾರರ ಜೊತೆ ಸಿಎಂ ಸಭೆ ಮಾಡಬೇಕು.
4. ಉತ್ತರ ಕರ್ನಾಟಕ ಭಾಗದ ಶಾಸಕರು, ಸಚಿವರು ಅಧಿವೇಶನದಲ್ಲಿ ಅಭಿವೃದ್ಧಿ ಕುರಿತು ಹೋರಾಟ ಮಾಡಬೇಕು.
5. ಸರ್ಕಾರ ಬೇಡಿಕೆಗಳನ್ನ ಈಡೇರಿಸದಿದ್ದರೆ ಜನರ ಬಳಿ ಹೋಗಿ ಜನಾಗ್ರಹ ಸಂಗ್ರಹಣೆ.

BLG SWAMIJI

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article