ಎಟಿಎಂ ಹಲ್ಲೆಕೋರ ಮಧುಕರ್ ರೆಡ್ಡಿಗಾಗಿ 3 ರಾಜ್ಯಗಳ ಪೈಪೋಟಿ

Public TV
1 Min Read

ಬೆಂಗಳೂರು: ಎಟಿಎಂ ಹಲ್ಲೆಕೋರ ಮಧುಕರ್ ರೆಡ್ಡಿಗಾಗಿ ಆಂಧ್ರ, ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಪೈಪೋಟಿ ಶುರುವಾಗಿದೆ.

ಮೂರು ರಾಜ್ಯಗಳಲ್ಲೂ ಮಧುಕರ್ ರೆಡ್ಡಿ ಅಪರಾಧ ಮಾಡಿರೋ ಹಿನ್ನೆಲೆಯಲ್ಲಿ ತನಿಖೆಗಾಗಿ ಪೊಲೀಸರು ಮಧುಕರ್ ರೆಡ್ಡಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇಂದು ಮಧುಕರ್‍ನನ್ನು ಆಂಧ್ರ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. ಮಧುಕರ್ ರೆಡ್ಡಿಯನ್ನ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಆಂಧ್ರ ಪೊಲೀಸರು ಮನವಿ ಮಾಡಲಿದ್ದಾರೆ. ಆಂಧ್ರ ಬಳಿಕ ಕರ್ನಾಟಕ ಪೊಲೀಸರು ಮಧುಕರ್‍ನನ್ನು ವಶಕ್ಕೆ ಪಡೆಯಲಿದ್ದಾರೆ.

ಇದೇ ಸಂದರ್ಭದಲ್ಲಿ ಬೆಂಗಳೂರು ಪೊಲೀಸರು ತಾಂತ್ರಿಕ ವಿಚಾರಣೆ ಮುಗಿಸುವ ಸಾಧ್ಯತೆ ಇದೆ. ಸಿಸಿಟಿವಿ ದೃಶ್ಯಾವಳಿ, ಬೆರಳಚ್ಚು ದೃಢೀಕರಣ ಎಲ್ಲವನ್ನೂ ಮುಗಿಸಲಿದ್ದಾರೆ. ಈಗಾಗ್ಲೇ ಬೆಂಗಳೂರು ಪೊಲೀಸರು ಚಿತ್ತೂರಿನಲ್ಲಿ ಬೀಡು ಬಿಟ್ಟಿದ್ದು, ಸೋಮವಾರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಚಿತ್ತೂರಿಗೆ ತೆರಳಲಿದ್ದಾರೆ. ಮೂರು ವರ್ಷದ ಹಿಂದೆ ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದಾಗ ಹೇಮಂತ್ ನಿಂಬಾಳ್ಕರ್ ಜಂಟಿ ಪೊಲೀಸ್ ಆಯುಕ್ತರಾಗಿದ್ದರು.

ತನಿಖಾ ತಂಡ ಮೂರು ತಿಂಗಳು ಆಂಧ್ರದಲ್ಲಿ ಬೀಡು ಬಿಟ್ಟು ತನಿಖೆ ನಡೆಸಿದೆ. ಸೋಮವಾರದ ಬಳಿಕ ಕರ್ನಾಟಕ ಪೊಲೀಸರು ಮಧುಕರ್‍ನನ್ನು ವಶಕ್ಕೆ ಪಡೆದು ತಾಂತ್ರಿಕ ಕೆಲಸ ಮುಗಿಸಲಿದ್ದಾರೆ.

ಮೂರು ರಾಜ್ಯಗಳಲ್ಲಿ ಮಧುಕರ್‍ನ ಅಪರಾಧಗಳು:

ಆಂಧ್ರ :
> 2005 ರ ಆನಂದ ರೆಡ್ಡಿ ಕೊಲೆ ಪ್ರಕರಣ ( ನೀರಿನ ವಿಚಾರಕ್ಕೆ ಬಾಂಬ್ ಇಟ್ಟು ಕೊಲೆ ಮಾಡಿದ್ದ)
> 2011ರಲ್ಲಿ ಕಡಪ ಜೈಲಿನಿಂದ ಎಸ್ಕೇಪ್ ಆಗಿದ್ದ ಪ್ರಕರಣ
> 2013, ನ. 10 ಧರ್ಮಾವರಂ ಕೊಲೆ ಪ್ರಕರಣ ( ಪ್ರಮೀಳಮ್ಮ)
> ಹೈದ್ರಾಬಾದ್ ಮತ್ತು ಗುಂಟೂರಿನಲ್ಲಿ ಕೊಲೆ ಯತ್ನ ಪ್ರಕರಣಗಳು

ಕರ್ನಾಟಕ:
2013, ನ.19 ರಂದು ಎಟಿಎಂನಲ್ಲಿ ಜ್ಯೋತಿ ಉದಯ್ ಕೊಲೆ ಯತ್ನ ಪ್ರಕರಣ

ಕೇರಳ: 
> ಎರ್ನಾಕುಲಂನಲ್ಲಿ ನಡೆದ ಎರಡು ಸರ ಅಪಹರಣ ಪ್ರಕರಣ
> ಎಟಿಎಂನಲ್ಲಿ ನಡೆದ ಕೊಲೆ ಯತ್ನ ಪ್ರಕರಣ

Share This Article
Leave a Comment

Leave a Reply

Your email address will not be published. Required fields are marked *