ಡಿಎಂಕೆ ಮುಖಂಡನ ಮೇಲೆ ಹಲ್ಲೆ ನಡೆದಿದ್ದ ಹೋಟೆಲ್‍ನಲ್ಲಿ ವಿಶೇಷ ಪೂಜೆ

Public TV
1 Min Read

ಬೆಂಗಳೂರು: ಡಿಎಂಕೆ (DMK) ಮುಖಂಡ ವಿ.ಕೆ.ಗುರುಸ್ವಾಮಿ (V.K Guruswamy) ಮೇಲೆ ಹಲ್ಲೆ ನಡೆದಿದ್ದ ಹೋಟೆಲ್‍ನಲ್ಲಿ ವಿಶೇಷ ಪೂಜೆ ಹೋಮ-ಹವನ ಮಾಡಲಾಗಿದೆ.

ಹೌದು. ಸೋಮವಾರ ಸಂಜೆ ಬಾಣಸವಾಡಿಯ ಸುಖ್ ಸಾಗರ್ ಹೋಟೆಲ್ ನಲ್ಲಿ ಗುರುಸ್ವಾಮಿ ಮೇಲೆ ಅಟ್ಯಾಕ್ ಆಗಿತ್ತು. ಹಲ್ಲೆಯಿಂದ ಹೋಟೆಲ್‍ ತುಂಬಾ ರಕ್ತ ಚೆಲ್ಲಿತ್ತು. ಹೋಟೆಲ್‍ನಲ್ಲಿ ರಕ್ತ ಹರಿದಿದ್ದಕ್ಕೆ ಹೋಟೆಲ್ ಸ್ವಚ್ಛಗೊಳಿಸಿ ಮಾಲೀಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿಎಂಕೆ ನಾಯಕ ಅಳಗಿರಿ ಆಪ್ತನ ಮೇಲೆ ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್

ಏನಿದು ಘಟನೆ..?: ತಮಿಳುನಾಡಿನ ಡಿಎಂಕೆ ನಾಯಕ ಅಳಗಿರಿಯ ಆಪ್ತ ಮಧುರೈನ ವಿಕೆ ಗುರುಸ್ವಾಮಿ ಮೂರ್ತಿ (55) ಮೇಲೆ 4-5 ಜನರ ಗುಂಪು ದಾಳಿ ಮಾಡಿತ್ತು. ಗುರುಸ್ವಾಮಿ ಮೂರ್ತಿ ಕಾನೂನು ಸಮಸ್ಯೆ ಇರುವ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ. ಭಾನುವಾರ ವಿಮಾನದ ಮೂಲಕ ಬಂದು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದ.

ಸೋಮವಾರ ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು ಹೋಟೆಲ್‍ಗೆ ಹೋಗಿದ್ದ. ಬ್ರೋಕರ್ ಜೊತೆ ಮಾತುಕತೆ ನಡೆಸುತ್ತಿದ್ದಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ 4-5 ಜನರು ಏಕಾಏಕಿ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಗುರುಸ್ವಾಮಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್