ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು

Public TV
1 Min Read

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತಕ್ಕೆ (Fire Crackers incident Attibele) ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ – ಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಅಧಿಕಾರಿಗಳ ಅಮಾನತು ಮಾಡಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್