ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್‌

Public TV
1 Min Read

ಬೆಂಗಳೂರು: ಅತ್ತಿಬೆಲೆ ಪಟಾಕಿ ಅವಘಡ (Attibele Firecrackers Tragedy) ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದಲ್ಲಿ ಮುಂದೆ ಅತ್ತಿಬೆಲೆ ಅವಘಡಗಳು ಮರುಕಳಿಸದಂತೆ ಕ್ರಮವಹಿಸುವ ಕುರಿತು ಚರ್ಚೆ ನಡೆಸಿ, ಹಲವು ತೀರ್ಮಾನಗಳನ್ನು ಪ್ರಕಟಿಸಿದರು.

ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಅತ್ತಿಬೆಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಹಶೀಲ್ದಾರ್, ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್, ಸ್ಥಳೀಯ ಮುಖ್ಯ ಅಗ್ನಿಶಾಮಕ ದಳ ಮುಖ್ಯಸ್ಥರನ್ನು ಅಮಾನತು ಮಾಡಲು ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್‌ ಜಾರಿ ಮಾಡಲು ಸೂಚಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಮನೆಗೆ ಕಲ್ಲೆಸೆತ; ವ್ಯಕ್ತಿ ಪೊಲೀಸ್ ವಶಕ್ಕೆ

 

ಅತ್ತಿಬೆಲೆ ಪಟಾಕಿ ಅಂಗಡಿ ಅವಘಡ ಪ್ರಕರಣದಲ್ಲಿ ರಾಮಸ್ವಾಮಿ ರೆಡ್ಡಿ ಎಂಬುವನು ಮಾರಾಟ ಮಾಡುವುದಕ್ಕೆ ಲೈಸೆನ್ಸ್ ತೆಗೆದುಕೊಂಡಿದ್ದ. ಆದರೆ ಉಗ್ರಾಣಕ್ಕೆ ಲೈಸೆನ್ಸ್ ಪಡೆದಿರಲಿಲ್ಲ. ತಮಿಳುನಾಡಿನಿಂದ ಪಟಾಕಿ ಸಾಮಾಗ್ರಿ ತೆಗೆದುಕೊಂಡು ಬಂದಿದ್ದಾನೆ. ಸೆಪ್ಟೆಂಬರ್‌ನಲ್ಲಿ 2026ರ ವರೆಗೆ ಒಂದು ಲೈಸೆನ್ಸ್ ಮಂಜೂರು ಮಾಡಲಾಗಿದೆ. ಆದರೆ ಇದು ನಕಲಿ ಲೈಸೆನ್ಸ್‌ (Fake Licence) ಆಗಿದ್ದು ಎಲ್ಲರ ವಿರುದ್ಧ ಕ್ರಮ ಆಗಲಿದೆ ಎಂದು ತಿಳಿಸಿದರು.

ಲೈಸೆನ್ಸ್ ಪರಿಷ್ಕರಣೆ ಮಾಡಲು ಸೂಚನೆ ನೀಡಲಾಗಿದ್ದು, ಈ ಮೊದಲು 5 ವರ್ಷಕ್ಕೆ ಲೈಸೆನ್ಸ್ ಅವಧಿ ಇತ್ತು. ಈಗ ಪ್ರತಿ ವರ್ಷವೂ ಲೈಸೆನ್ಸ್ ಪಡೆಯವುದನ್ನು ಕಡ್ಡಾಯ ಮಾಡಿದ್ದೇವೆ. ಪಟಾಕಿ ಗೊಡೌನ್‌ಗಳ ಮುಂಭಾಗದಲ್ಲಿ ವಿಶಾಲವಾದ ಖಾಲಿ ಜಾಗ ಇರುವುದು ಕಡ್ಡಾಯ ಮಾಡಲಾಗಿದೆ ಎಂದರು.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್