ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ

Public TV
1 Min Read

ಬೆಂಗಳೂರು: ಆಟೋ ಚಾಲಕರೊಬ್ಬರು ಚಿನ್ನ ಅಡವಿಟ್ಟು 2 ಲಕ್ಷ ರೂಪಾಯಿ ಸಾಲ ಪಡೆದು ಅದನ್ನು ಬೈಕ್‍ನಲ್ಲಿ ಇಟ್ಟು ದಾರಿ ಮಧ್ಯೆ ಬಿರಿಯಾನಿ ತಿನ್ನಲು ಹೋಗಿ ವಾಪಸ್ ಬರುವಾಗ ಬೈಕ್‍ನಲ್ಲಿ ಇಟ್ಟಿದ್ದ ಹಣ ಕಳವಾಗಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಆಟೋ ಚಾಲಕರಾಗಿರುವ ಹನುಮಂತರಾಯ ಬ್ಯಾಂಕ್‍ನಲ್ಲಿ ಸಾಲ ಮಾಡಿದ್ದರು. ಬಳಿಕ ಕಟ್ಟಬೇಕಾದ ಅನಿವಾರ್ಯತೆಯಿಂದ ತಮ್ಮಲ್ಲಿದ್ದ ಚಿನ್ನ ಅಡವಿಟ್ಟು 2 ಲಕ್ಷ ಹಣ ಹೊಂದಿಸಿ ಅದನ್ನು ಬೈಕ್‍ನ ಸೈಡ್ ಲಾಕರ್‌ನಲ್ಲಿ ಇಟ್ಟುಕೊಂಡು ಅವರ ಬಾಮೈದನೊಂದಿಗೆ ಮನೆಗೆ ತೆರಳುತ್ತಿದ್ದರು. ಈ ನಡುವೆ ದಾರಿ ಮಧ್ಯೆ ಬಿರಿಯಾನಿ ತಿನ್ನಲೆಂದು ಬೈಕ್‍ನಿಂದ ಇಬ್ಬರು ಇಳಿದು ಹೋಗಿದ್ದಾರೆ. ಈ ವೇಳೆ ಬೈಕ್ ಲಾಕರ್‌ನಲ್ಲಿದ್ದ ಹಣವನ್ನು ಕೂಡ ಅಲ್ಲೇ ಬಿಟ್ಟು ಹೋಗಿದ್ದಾರೆ. ನಂತರ ಬಿರಿಯಾನಿ ತಿಂದು ಬರುವಷ್ಟರಲ್ಲಿ 2 ಲಕ್ಷ ರೂಪಾಯಿಯನ್ನು ಕಳ್ಳರು ಎಗರಿಸಿದ್ದಾರೆ. ಇದನ್ನೂ ಓದಿ: ಫ್ರೀಯಾಗಿ ಕೋಳಿ ಕೊಡಲಿಲ್ಲ- ಹಿಗ್ಗಾಮುಗ್ಗ ಥಳಿಸಿದ್ರು

ಬಿರಿಯಾನಿ ತಿಂದು ಹನುಮಂತರಾಯ ಬೈಕ್ ಬಳಿ ಬಂದು ಹಣವನ್ನು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಕೂಡಲೇ ಪಕ್ಕದಲ್ಲಿದ್ದ ಅಂಗಡಿಯೊಂದರ ಸಿಸಿಟಿವಿ ಪರಿಶೀಲಿಸಿದಾಗ ಸಾಮಾನ್ಯರಂತೆ ಓಡಾಡಿ, ಹಣ ಕಳ್ಳತನ ಮಾಡಿದ ದೃಶ್ಯ ಸೆರೆಯಾಗಿದೆ. ಈ ಘಟನೆ ಕೆಳದಿನಗಳ ಹಿಂದೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

Share This Article
Leave a Comment

Leave a Reply

Your email address will not be published. Required fields are marked *