ಪಾದಚಾರಿಗೆ ಆಟೋ ಡಿಕ್ಕಿ – ವ್ಯಕ್ತಿ ಸ್ಥಿತಿ ಗಂಭೀರ

Public TV
1 Min Read

ಮಡಿಕೇರಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಾನಿವಾರಸಂತೆ ಗ್ರಾಮದ ಗುಂಡೂರಾವ್ ಬಡಾವಣೆಯಲ್ಲಿ ನಡೆದಿದೆ. ಇದನ್ನೂ ಓದಿ: ಪತ್ನಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು- ಬೆಂಗಳೂರಲ್ಲೇ ಬೀಡುಬಿಟ್ಟ ಶಿವಕುಮಾರ ಉದಾಸಿ

accident

ಬೆಳಗ್ಗೆ ಮರಿಶೆಟ್ಟಿಯವರು ಗುಂಡೂರಾವ್ ಬಡಾವಣೆಯಿಂದ ಶಾನಿವಾರ ಸಂತೆ ಕೆ.ಆರ್.ಸಿ ವೃತ್ತದ ಕಡೆಗೆ ಬರುತ್ತಿದ್ದ ವೇಳೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

accident

ಆಟೋ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ರವಿ ಎಂದು ಗುರುತಿಸಲಾಗಿದ್ದು, ಇದೀಗ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಟೋವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಪರಿಣಾಮದಿಂದ ಸ್ವಲ್ಪ ಸಮಯದಲ್ಲಿ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಆಟೋಗೆ ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಹಾಗೂ ಆಟೋ ನಜ್ಜುಗುಜ್ಜಾಗಿದೆ. ಅಲ್ಲದೇ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಈ ಸಂಬಂಧ ಶಾನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *