8 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿಯಿದ್ದ ಬ್ಯಾಗ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
1 Min Read

ಹುಬ್ಬಳ್ಳಿ: ಪ್ರಯಾಣಿಕ ಆಟೋದಲ್ಲಿ ಬಿಟ್ಟು ಹೋಗಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿಯನ್ನು ವಾಪಸ್ ನೀಡಿ ಆಟೋ ಚಾಲಕ (Auto Driver) ಪ್ರಾಮಾಣಿಕತೆ ಮೆರೆದಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ನಾಗರಾಜ್ ಎಂಬವರ ಆಟೋದಲ್ಲಿ ಮೂವರು ಗೋಕುಲ ಬಸ್ ನಿಲ್ದಾಣದಿಂದ ಹೊಸುರ ಬಸ್ ನಿಲ್ದಾಣದ ವರೆಗೆ ಪ್ರಯಾಣ ಮಾಡಿದ್ದರು. ಆಟೋ ಇಳಿಯುವಾಗ ಬ್ಯಾಗ್ ಆಟೋದಲ್ಲಿ ಬಿಟ್ಟು ಹೋಗಿದ್ದರು. ಇದನ್ನೂ ಓದಿ: ಏ.20ಕ್ಕೆ ಚಿಕ್ಕಬಳ್ಳಾಪುರಕ್ಕೆ ಮೋದಿ

ಬ್ಯಾಗ್‌ನಲ್ಲಿ 4 ತೊಲೆ ಬಂಗಾರ, 16 ತೊಲೆ ಬೆಳ್ಳಿ ಹಾಗೂ ಮನೆಯ ದಾಖಲಾತಿಗಳು ಇದ್ದವು. ಧಾರವಾಡದ ನಿಸ್ಸಾಮುದ್ದೀನ್ ಕಾಲೊನಿ ಮಹಿಳೆ ಬ್ಯಾಗ್ ಬಿಟ್ಟು ಹೋಗಿದ್ರು. ಇದನ್ನು ಗಮನಿಸಿದ ಆಟೋ ಚಾಲಕ, ಪ್ರಯಾಣಿಕರನ್ನು ಗುರುತಿಸಿ ಬ್ಯಾಗ್‌ನ್ನು ವಾಪಸ್ ನೀಡಿದ್ದಾರೆ.

ಹುಬ್ಬಳ್ಳಿಯ ಗೋಕುಲ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಇತರೆ ಆಟೋ ಚಾಲಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಆಟೋ ಚಾಲಕ ನಾಗರಾಜ್ ಬ್ಯಾಗ್‌ನ್ನು ಹಿಂದಿರುಗಿಸಿದ್ದಾರೆ. ಆಟೋ ಚಾಲಕನ ಪ್ರಾಮಾಣಿಕತೆ ಮೆಚ್ಚಿ ಪೊಲೀಸರು ಸನ್ಮಾನಿಸಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕಿಡಿ

Share This Article