ಅಯೋಧ್ಯೆ ತೀರ್ಪು – ಸೋಷಿಯಲ್ ಮೀಡಿಯಾಗಳಲ್ಲಿ ಪಾಲಿಸಲೇಬೇಕಾದ 9 ಸೂಚನೆಗಳು

Public TV
2 Min Read

ಬೆಂಗಳೂರು: ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಪೊಲೀಸರು ಕೆಲವೊಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು-ಸುದ್ದಿ ಹರಡದಂತೆ ಸೂಚನೆ ನೀಡಿದ್ದಾರೆ.

ಪರ-ವಿರೋಧ ತೀರ್ಪು ಬಂದರೆ ವಿಜಯೋತ್ಸವ ಆಚರಿಸುವುದಾಗಲೀ ಅಥವಾ ಘೋಷಣೆ ಕೂಗುವುದನ್ನಾಗಲಿ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ಸರ್ಪಗಾವಲು – ಇಂಟರ್‌ನೆಟ್ ಸ್ಥಗಿತ, 8 ತಾತ್ಕಾಲಿಕ ಜೈಲು ಸ್ಥಾಪನೆ

ಸಾರ್ವಜನಿಕರಿಗೆ ಸೂಚನೆಗಳು
– ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಹಾಗೂ ಇನ್ನಿತರೆ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು, ಪೋಸ್ಟ್‌ಗಳನ್ನು, ಕಮೆಂಟ್‍ಗಳನ್ನು ಹಾಕಬೇಡಿ.

– ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನಿಂದ ನಿಯಮಗಳು ಅನ್ವಯವಾಗಲಿದ್ದು, ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ವಾಟ್ಸಾಪ್, ಟ್ವಿಟ್ಟರ್ ಹಾಗೂ ಇನ್ನಿತರೆ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗಿದೆ.  ಇದನ್ನೂ ಓದಿ:ರಾಜ್ಯಾದ್ಯಂತ ಕಟ್ಟೆಚ್ಚರ – ಬಸ್ಸು ಆಟೋ, ಟ್ಯಾಕ್ಸಿ, ಮೆಟ್ರೋ ಯಥಾಸ್ಥಿತಿ

– ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ತಪ್ಪು ಸಂದೇಶಗಳನ್ನು ಯಾರಿಗೂ ರವಾನಿಸಬೇಡಿ, ಈ ಬಗ್ಗೆ ಮಕ್ಕಳು, ಸಹೋದರ, ಸಹೋದರಿಯರು, ಅಕ್ಕಪಕ್ಕದವರು ಹಾಗೂ ಸಂಬಂಧಿಕರಿಗೆ ಈ ಮಾಹಿತಿಯನ್ನು ತಿಳಿಸಿ.

– ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಪೋಸ್ಟ್‌ ಅಥವಾ ವೀಡಿಯೋ ಸಂದೇಶಗಳನ್ನು ಪೋಸ್ಟ್‌ ಮಾಡಬೇಡಿ. ಇದನ್ನೂ ಓದಿ:ಒಂದೂವರೆ ಶತಮಾನದ ಅಯೋಧ್ಯೆ ವ್ಯಾಜ್ಯ ಇಂದು ಇತ್ಯರ್ಥ – ಯಾರ ವಾದ ಏನು? ಯಾವ ವರ್ಷ ಏನಾಯ್ತು?

– ಯಾವುದೇ ರಾಜಕೀಯ ಹಾಗೂ ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶಗಳನ್ನು ಕಳುಹಿಸುವುದು, ರವಾನಿಸುವುದು ಅಪರಾಧವಾಗಿದ್ದು ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ. ಸುದ್ದಿಯ ಮೂಲವನ್ನು ಪರಿಶೀಲಿಸದೇ ಅದನ್ನು ಇತರರಿಗೆ ಕಳುಹಿಸಲು ಹೋಗಬೇಡಿ.

– ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರವು ದೇಶದ ಅತೀ ಗಂಭೀರ ವಿಚಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರುಗಳು ಗಂಭೀರವಾಗಿ ಯೋಚಿಸಿ, ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವಂತಹ ಸಂದೇಶಗಳನ್ನು ಹಾಕಬೇಡಿ. ಇದನ್ನೂ ಓದಿ:ಅಯೋಧ್ಯೆ ತೀರ್ಪು ಏನೇ ಬಂದ್ರೂ ಶಾಂತಿಯುತವಾಗಿ ಸ್ವಾಗತಿಸ್ತೀವಿ: ರೋಶನ್ ಬೇಗ್

– ಸಾಮಾಜಿಕ ಜಾಲತಾಣಗಳಲ್ಲಿ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ಬೇರೆ ಗ್ರೂಪ್‍ಗಳಿಗೆ ಮರು ಕಳುಹಿಸುವುದು (Forward) ಕಂಡುಬಂದಲ್ಲಿ, ಸಂದೇಶವನ್ನು ಕಳುಹಿಸಿದ ವ್ಯಕ್ತಿ ಮತ್ತು ಗ್ರೂಪ್ ಅಡ್ಮಿನ್‍ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು.

– ಈ ವಿಚಾರವು ದೇಶದ ಸಾರ್ವಭೌಮತ್ವ ಹಾಗೂ ಸೌಹಾರ್ದತೆಗೆ ನೇರವಾಗಿ ಪರಿಣಾಮ ಬೀರುವಂತಹ ವಿಚಾರವಾದ್ದರಿಂದ ಯಾವುದೇ ತಪ್ಪು ಸಂದೇಶವನ್ನು ರವಾನಿಸಬೇಡಿ.

– ನ್ಯಾಯಾಲಯದ ತೀರ್ಪನ್ನು ನಿಂದಿಸಬೇಡಿ. ತೀರ್ಪಿನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಅಭಿಪ್ರಾಯವನ್ನು ಎಲ್ಲೂ ಹಂಚಿಕೊಳ್ಳಬೇಡಿ.

ತಪ್ಪದೇ ಈ ಮೇಲ್ಕಂಡ ವಿಚಾರವನ್ನು ಎಲ್ಲರಿಗೂ ತಿಳಿಸಿ, ವಿಷಯದ ಸಂಬಂಧ ನಿಯಮಗಳ ಬಗ್ಗೆ ಗಮನಹರಿಸಿ ಹಾಗೂ ಗುಂಪುಗಳು ಸದಾ ಜಾಗರೂಕರಾಗಿ ಇರಿ. ಮಾದರಿ ಸಮಾಜಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ ಎಂದು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *