ನೀರಿನ ಟ್ಯಾಂಕ್ ಹತ್ತಿ ಬಿ.ಸಿ ಪಾಟೀಲ್ ಬೆಂಬಲಿಗ ಆತ್ಮಹತ್ಯೆಗೆ ಯತ್ನ

Public TV
1 Min Read

ಹಾವೇರಿ: ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್‍ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗನೋರ್ವ ನೀರಿನ ಟ್ಯಾಂಕ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಿರೇಕೆರೂರಿನಲ್ಲಿ ನಡೆದಿದೆ.

ಶಾಸಕ ಬಿ.ಸಿ ಪಾಟೀಲ್ ಮನೆ ಮುಂದೆ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಶಾಸಕ ಬಿ.ಸಿ ಪಾಟೀಲ್ ಸಮಾಧಾನ ಪಡಿಸಲು ಆಗಮಿಸಿದರು. ಮನೆ ಮುಂದೆ ಇರುವ ನೀರಿನ ಟ್ಯಾಂಕ್ ಮೇಲೆ ಬೆಂಬಲಿಗ ಪುಟ್ಟೇಶ್ ಗೊರವರ್ ಹತ್ತಿದ್ದಾನೆ. ಸಚಿವ ಸ್ಥಾನವನ್ನು ನೀಡಬೇಕು ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದರು. ನಂತರ ಬಿ.ಸಿ ಪಾಟೀಲ್ ಸಮಾಧಾನ ಪಡಿಸಿ ಹಾಗೂ ಪೊಲೀಸರು ಟ್ಯಾಂಕ್ ಮೇಲೆ ಹತ್ತಿ ಪುಟ್ಟೇಶ್ ನನ್ನು ಕೆಳಗಡೆ ಇಳಿಸಿದರು.

ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಬಿ.ಸಿ ಪಾಟೀಲ್ ನಿವಾಸದ ಮುಂದೆ ಅಭಿಮಾನಿಗಳು, ಕಾರ್ಯಕರ್ತರು ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ಸಿ ಪಾಟೀಲ್ ಮೂರು ಭಾರಿ ಆಯ್ಕೆ ಆಗಿದ್ದಾರೆ. ಮತ್ತೆ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *