ಕತ್ತೆ ಕಾಯಲು ಹೋಗಿದ್ರಾ..?- ಅಧಿಕಾರಿಗಳಿಗೆ ಬಿಎಸ್‍ವೈ ತರಾಟೆ

Public TV
1 Min Read

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡು 20 ದಿನ ಕಳೆದರೂ ಅಧಿಕಾರಿಗಳು ಭೇಟಿ ನೀಡಿಲ್ಲ. ಅಲ್ಲಿನ ತಹಶೀಲ್ದಾರ್ ಕತ್ತೆ ಕಾಯಲು ಹೋಗಿದ್ದಾರಾ? ನಿಮ್ಮ ಮನೆಯಲ್ಲಿ ಇಂತಹ ಘಟನೆ ನಡೆದಿದ್ದರೆ ಸುಮ್ಮನೆ ಇರುತ್ತಿದ್ರಾ..? ಏನ್ ನಿಮ್ಮ ತಲೆ ಮಾಹಿತಿ ಸಂಗ್ರಹ ಮಾಡುವುದು. ರೈತ ಆತ್ಮಹತ್ಯೆ ಮಾಡಿಕೊಂಡ 24 ಗಂಟೆಯ ಒಳಗಾಗಿ ನೀವು ಭೇಟಿ ನೀಡಬೇಕಿತ್ತು. ಕುಟುಂಬಸ್ಥರಿಗೆ ಧೈರ್ಯ ಹೇಳಬೇಕಿತ್ತು. ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೆ ನೀವು ತಮಾಷೆ ನೋಡುತ್ತಾ ಕುಳಿತುಕೊಳ್ಳುತ್ತೀರಾ ಎಂದು ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಏನು ಕ್ರಮ ಕೈಗೊಂಡಿದ್ದಾರೆ. ನೀವು ಹೇಗೆ ಮಾಹಿತಿ ಪಡೆದಿದ್ದೀರಿ ಅಂತ ನನಗೆ ಗೊತ್ತಿಲ್ಲ. ಆದಷ್ಟು ಬೇಗ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಸ್ಥರಿಗೆ ಪರಿಹಾರ ಸಿಗುವ ವ್ಯವಸ್ಥೆ ಮಾಡಿ ಎಂದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಶೇ 100 ರಷ್ಟು ಬೆಳೆನಾಶವಾಗಿದೆ. ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಲ್ಲಿ ವಿಫಲವಾಗಿರುವಿರಿ. ನರೇಗಾ ಯೋಜನೆ ಅವ್ಯವಹಾರದ ಬಗ್ಗೆ ಎಚ್ಚರ ವಹಿಸಿ ಎಂದು ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *