ಆಪರೇಷನ್ ಕಮಲದ ಬ್ಯುಸಿಯಲ್ಲಿ ಬಿಎಸ್‍ವೈಯಿಂದ ಇಂದು ಹಳ್ಳಿಗಳತ್ತ ಯಾತ್ರೆ

Public TV
1 Min Read

ಬೆಂಗಳೂರು: ಒಂದು ಕಡೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ರೆಡಿಯಾಗಿದ್ದರೆ, ಇತ್ತ ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.

ಮಳೆ ಆಗುವುದಕ್ಕೆ ಈಗ ಒಂದು ದಿನವಷ್ಟೇ ಬಾಕಿ ಇದೆ. ಅಲ್ಲದೆ ಉತ್ತರ ಕರ್ನಾಟಕದ ಹಲವೆಡೆ ಈಗಾಗಲೇ ಮಳೆಯಾಗುತ್ತಿದೆ. ಇದರ ನಡುವೆ ಬಿಎಸ್ ಯಡಿಯೂರಪ್ಪ ಅವರಿಗೆ ಈಗ ಬರದ ನೆನಪಾದಂತಿದೆ.

ಉತ್ತರ ಕರ್ನಾಟಕ ಭಾಗದಲ್ಲಿ 3 ದಿನಗಳ ಕಾಲ ಯಡಿಯೂರಪ್ಪ ಬರ ಅಧ್ಯಯನ ಕೈಗೊಂಡಿದ್ದಾರೆ. ಬಿಎಸ್‍ವೈ ಇಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯ ಬದಾಮಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹುನಗುಂದ ತಾಲೂಕಿನಲ್ಲಿ ಬರ ಪರಿಶೀಲನೆ ಮಾಡಿದ ಬಳಿಕ ರಾತ್ರಿ ಕೊಪ್ಪಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಶನಿವಾರ ಕೊಪ್ಪಳ, ರಾಯಚೂರಿನ ಲಿಂಗಸುಗೂರಿನಲ್ಲಿ ಪರಿಶೀಲನೆ ಮಾಡಲಿದ್ದಾರೆ. ಜೂನ್ 9ರಂದು ಗುರುಮಿಠಕಲ್ ಕ್ಷೇತ್ರದಲ್ಲಿ ಬರ ಅಧ್ಯಯನ ಮಾಡಿ ವಾಪಸ್ಸಾಗಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *