ಡಿಸೆಂಬರ್ ನಂತ್ರ ಬಿಎಸ್‌ವೈ ಕೇರಳ ರಾಜ್ಯಪಾಲ: ಶಾಸಕ ನಾಗನಗೌಡ ಕಂದಕೂರ

Public TV
1 Min Read

ಯಾದಗಿರಿ: ಬಿಜೆಪಿ ಹೈಕಮಾಂಡ್ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಸೂಚನೆ ನೀಡಿದೆ ಎಂದು ಯಾದಗಿರಿಯಲ್ಲಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಪಕ್ಷದಲ್ಲಿ ಕ್ಷೇಮ ಇಲ್ಲ. ಅನಿವಾರ್ಯ ಕಾರಣಗಳಿಂದ ಹೈಕಮಾಂಡ್ ಯಡಿಯೂರಪ್ಪನವರಿಗೆ ಎರಡು ತಿಂಗಳು ಗ್ರೇಸ್ ಪಿರೇಡ್ ಕೊಟ್ಟಿದ್ದಾರೆ. ಅದು ಡಿಸೆಂಬರ್‌ವರೆಗೂ ಮುಂದುವರಿಯುತ್ತದೆ ಎಂದರು.

ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪನವರನ್ನು ಕೆಳಗಿಳಿಯುವಂತೆ ಸೂಚಿಸಿದೆ. ಹೈಕಮಾಂಡ್ ಯಡಿಯೂರಪ್ಪ ಅವರ ಬಳಿ “ಡಿಸೆಂಬರ್‌ವರೆಗೂ ಜಾಗ ಖಾಲಿ ಮಾಡಿ. ಗೌರವಯುತವಾಗಿ ನಿಮ್ಮನ್ನು ಕೇರಳದ ರಾಜ್ಯಪಾಲರನ್ನಾಗಿ ಮಾಡುತ್ತೇವೆ. ನಿಮ್ಮ ಪುತ್ರ ವಿಜಯೇಂದ್ರ ಅವರನ್ನು ಎಮ್‌ಎಲ್‌ಸಿ ಮಾಡಿ ಮಂತ್ರಿಸ್ಥಾನ ನೀಡುತ್ತೇನೆ” ಎಂದು ಹೇಳಿದ್ದಾರೆ ಎಂದು ನಾಗನಗೌಡ ಕಂದಕೂರ ಹೇಳಿದ್ದಾರೆ.

ನಾಗನಗೌಡ ಅವರ ಈ ಹೇಳಿಗೆ ನಿಜಾನಾ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈ ಬಗ್ಗೆ ಯಡಿಯೂರಪ್ಪ ಆಗಲಿ, ಬಿಜೆಪಿ ಪಕ್ಷದವರಾಗಲಿ ಯಾವುದೇ ಹೇಳಿಕೆ ಸಹ ನೀಡಲಿಲ್ಲ. ಹಾಗಾಗಿ ಈ ಸುದ್ದಿ ಸತ್ಯನಾ ಅಥವಾ ಸುಳ್ಳೋ ಎಂಬುದು ಗೊತ್ತಿಲ್ಲ.

Share This Article
Leave a Comment

Leave a Reply

Your email address will not be published. Required fields are marked *