ಬಾಹುಬಲಿ ಪ್ರಭಾಸ್ ಮೆಸೇಜ್ ನೋಡಿ ಅಭಿಮಾನಿಗಳು ಫಿದಾ!

Public TV
1 Min Read

ಹೈದರಾಬಾದ್: ಬಾಹುಬಲಿಯ ನಟ ಪ್ರಭಾಸ್ ಫೇಸ್‍ಬುಕ್‍ನಲ್ಲಿ ಗಾಂಧೀಜಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಸ್ವಚ್ಛ ಭಾರತದ ಬಗ್ಗೆ ಉತ್ತಮ ಸಂದೇಶವನ್ನು ಪೋಸ್ಟ್ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಹಾತ್ಮ ಗಾಂಧೀಜಿಯವರು ದೇಶದ ಸ್ವಚ್ಛತೆಗಾಗಿ ಶ್ರಮಿಸಿದ್ದರು. ಈ ಬಾರಿ ನಡೆಯಲಿರುವ ಸ್ವಚ್ಛ ಭಾರತ್‍ನಲ್ಲಿ ನಾನು ಪಾಲ್ಗೊಳ್ಳುತ್ತಿದ್ದೇನೆ. ಕೆಲವೊಮ್ಮೆ ವೈಯಕ್ತಿಕವಾಗಿ ಈ ವಿಷಯದ ಬಗ್ಗೆ ಯೋಚಿಸುತ್ತೇನೆ. ದೇಶದ ನಾಗರಿಕನಾಗಿ ಇದು ನಮ್ಮ ಕರ್ತವ್ಯ ಮಾತ್ರ ಅಲ್ಲ ಇದು ಹವ್ಯಾಸ ಆಗಬೇಕೆಂದು ಅವರು ಹೇಳಿದ್ದಾರೆ.

ಈ ರೀತಿಯ ಯೋಚನೆ ಮಾಡುವ ನಾವೆಲ್ಲ ಸೇರಿಕೊಂಡಿ ಭಾರತವನ್ನು ಸ್ವಚ್ಛವಾಗಿ ಇಡೋಣ ಹಾಗೂ ನಾವೆಲ್ಲರೂ ಜೊತೆಯಾಗಿದ್ದರೆ ಭಾರತವನ್ನು ಇನ್ನಷ್ಟು ಸುಂದರವಾಗಿಸಬಹುದು ಎಂದು ಪ್ರಭಾಸ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *