ವೈದ್ಯರ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ

Public TV
1 Min Read

ಬೀದರ್: ವೈದ್ಯರ ನಿರ್ಲಕ್ಷ್ಯದಿಂದ ಹಸಗೂಸು ಸಾವನ್ನಪ್ಪಿದೆ ಎಂದು ಬ್ರಿಮ್ಸ್ ಆಸ್ಪತ್ರೆ ವೈದ್ಯರ ವಿರುದ್ಧ ಮಗುವಿನ ಪೋಷಕರು ಆರೋಪಿಸಿದ್ದಾರೆ.

ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಮಗುವನ್ನು ಹೆತ್ತವರು ದಾಖಲಿಸಿದ್ದರು. ಆಗ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ನೀಡುತ್ತಿದ್ದರು. ಬುಧವಾರ ನಿಮ್ಮ ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದ್ರೆ ಇಂದು ಮಗು ಸಾವನ್ನಪ್ಪಿದೆ ಎಂದಿದ್ದಾರೆ. ಮಗು ಮೃತಪಡಲು ವೈದ್ಯರ ನಿರ್ಲಕ್ಷ್ಯವೇ ಕಾರಣ. ನಿನ್ನೆ ಆರೋಗ್ಯವಾಗಿದ್ದ ಮಗು ಇಂದು ಸಾವನ್ನಪ್ಪಿದೆ ಎಂದರೇ ಏನರ್ಥ ಎಂದು ಹೆತ್ತವರು ಕಣ್ಣೀರಿಡುತ್ತಿದ್ದಾರೆ.

ಸದ್ಯ ಬ್ರೀಮ್ಸ್ ಆಸ್ಪತ್ರೆ ಮುಂದೆ ಮಗುವಿನ ಹೆತ್ತವರು ಹಾಗೂ ಸಂಬಂಧಿಕರು ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *