1 ವರ್ಷ 4 ತಿಂಗ್ಳ ಕಂದಮ್ಮನ ಜೀವ ಉಳಿಸಲು ಶಿವಮೊಗ್ಗದಿಂದ ಬೆಂಗ್ಳೂರಿಗೆ ಝೀರೋ ಟ್ರಾಫಿಕ್

Public TV
1 Min Read

– ಅಪ್ಪ-ಅಮ್ಮನ ಜಗಳದಲ್ಲಿ ಮಗುವಿನ ಮೇಲೆ ಮಚ್ಚಿನೇಟು
– ಸಾವು ಬದುಕಿನ ನಡುವಿನ ಹೋರಾಟದಲ್ಲಿ ಕಂದಮ್ಮ

ಶಿವಮೊಗ್ಗ: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿನಂತೆ ಪತಿ-ಪತ್ನಿ ಜಗಳದಲ್ಲಿ ಪುಟ್ಟ ಕಂದಮ್ಮವೊಂದು ಮಚ್ಚಿನಿಂದ ಹಲ್ಲೆಗೊಳಗಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ. ಇದನ್ನೂ ಓದಿ:  7 ದಿನದ ಹಸುಗೂಸಿಗೆ ಹೃದಯ ಸಮಸ್ಯೆ – ಝೀರೋ ಟ್ರಾಫಿಕ್‍ನಲ್ಲಿ ಶಿವಮೊಗ್ಗದಿಂದ ಬೆಂಗ್ಳೂರಿಗೆ ರವಾನೆ

ಹಿರಂನಾಜ್ ಹಲ್ಲೆಗೊಳಗಾದ ಒಂದು ವರ್ಷ ನಾಲ್ಕು ತಿಂಗಳಿನ ಹೆಣ್ಣು ಮಗು. ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ವೇದಾನಗರ ನಿವಾಸಿ ಜೀಷನ್ ಮತ್ತು ಹಾಜರಾಬಾನು ದಂಪತಿಯ ಮಗುವಾಗಿದೆ. ಕಳೆದ ಶುಕ್ರವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜೀಷನ್ ಹಾಗೂ ಹಾಜರಾಬಾನು ದಂಪತಿ ನಡುವೆ ಜಗಳ ನಡೆದಿದೆ. ಇದನ್ನೂ ಓದಿ: ಕೇವಲ 4 ಗಂಟೆ 32 ನಿಮಿಷದಲ್ಲಿ 370 ಕಿ.ಮೀ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ

ಈ ವೇಳೆ ಜೀಷನ್ ತನ್ನ ಪತ್ನಿ ಹಾಜರಾಬಾನು ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆಗ ಮಗು ಅಡ್ಡ ಬಂದ ಪರಿಣಾಮ ಮಚ್ಚಿನ ಏಟು ಮಗುವಿನ ಮೇಲೆ ಬಿದ್ದಿದ್ದು, ಕಂದಮ್ಮ ಗಂಭೀರವಾಗಿ ಗಾಯಗೊಂಡಿದೆ. ಈ ಬಗ್ಗೆ ಕಡೂರು ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಗಂಭೀರ ಗಾಯಗೊಂಡ ಮಗುವನ್ನು ತಕ್ಷಣ ಕಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಆರೋಗ್ಯದಲ್ಲಿ ಸುಧಾರಣೆ ಕಂಡು ಬಾರದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಝೀರೋ ಟ್ರಾಫಿಕ್ ಮೂಲಕ ಮಗುವನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ರವಾನಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *