ಸಿದ್ದರಾಮಯ್ಯ ಪುತ್ರ ಸಂಚರಿಸ್ತಿದ್ದ ಕಾರು ಡಿಕ್ಕಿ- ಬೈಕ್ ಸವಾರನಿಗೆ ಗಾಯ

Public TV
1 Min Read

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ನಡೆದಿದೆ.

ಪ್ರವಾಹದಿಂದ ತತ್ತರಿಸಿದ್ದ ಬಾದಾಮಿಯ ಜನತೆಯ ಅಹವಾಲು ಸ್ವೀಕರಿಸಲು ಯತೀಂದ್ರ ಅವರು ಬೆಂಬಲಿಗ ಜೋಗಿನ್ ಅವರ ಕಾರಿನಲ್ಲಿ ಬಂದಿದ್ದರು. ಈ ವೇಳೆ ಕಾರು, ಈರಣ್ಣ ಪಟ್ಟಣಶೆಟ್ಟಿ ಅನ್ನೋರ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ರಸ್ತೆ ಪಕ್ಕದ ಹೊಲಕ್ಕೆ ಹೋಗಿ ಬಿದ್ದಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಈರಣ್ಣ ಪಟ್ಟಣಶೆಟ್ಟಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಾಯಾಳುವನ್ನು ಕೂಡಲೇ ಬಾಗಲಕೊಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಘಟನೆ ಬಳಿಕ ಅಧಿಕಾರಿಗಳಿಗೆ ಗಾಯಾಳು ಬೈಕ್ ಸವಾರನ ಚಿಕಿತ್ಸೆ ಬಗ್ಗೆ ಗಮನ ಹರಿಸುವಂತೆ ಶಾಸಕ ಡಾ.ಯತೀಂದ್ರ ಅವರು ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *