ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ

1 Min Read

ಬೆಂಗಳೂರು: ಬಾಗಲಕೋಟೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಗಳ ಬಳಿ ಚರ್ಚಿಸಿದ್ದು, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಎಕ್ಸ್ನಲ್ಲಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ (Stone Pelting) ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ಫಿಶ್‌, ತರಕಾರಿ ಮಾರ್ಕೆಟ್‌ ಮೇಲೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ-ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಹೇಳಿದ್ದಾರೆ.

Share This Article