ನೆರೆ ಸಂತ್ರಸ್ತರನ್ನು ಕಾಪಾಡಿದ್ದು ರಾಜ್ಯದ ಜನ, ನೀವಲ್ಲ: ಸರ್ಕಾರದ ವಿರುದ್ಧ ಉಮಾಶ್ರೀ ಕಿಡಿ

Public TV
1 Min Read

ಬಾಗಲಕೋಟೆ: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬನಹಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಗಾಂಧಿ ವೃತ್ತದಲ್ಲಿ ಟೈರ್ ದಹಿಸಿ ಆಕ್ರೋಶ ಹೊರ ಹಾಕಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, ಸಂತ್ರಸ್ತರಿಗೆ ರಾಜ್ಯದ ಜನ ಅನೇಕ ಅವಶ್ಯಕ ವಸ್ತುಗಳನ್ನು ನೀಡಿದ್ದಾರೆ. ಅದರಲ್ಲಿ ಬಟ್ಟೆ, ಊಟ ಉಪಹಾರ ಹಾಸಿಗೆ ಹೊದಿಕೆ ಕೂಡ ಇವೆ. ಆದರೆ ರಾಜ್ಯ, ಕೇಂದ್ರ ಸರ್ಕಾರ ಏನೂ ಮಾಡಲಿಲ್ಲ. ಸಂತ್ರಸ್ತರನ್ನು ಕಾಪಾಡಿದ್ದು ರಾಜ್ಯದ ಜನ ನೀವಲ್ಲ ಎಂದು ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೂಡಲೇ ನೆರೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ನೆರೆ ಪೀಡಿತ ಪ್ರದೇಶಗಳಿಗೆ 1,000 ಕೋಟಿ ರೂ. ಬಿಡುಗಡೆ

Share This Article
Leave a Comment

Leave a Reply

Your email address will not be published. Required fields are marked *