ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

Public TV
2 Min Read

– ಬನಶಂಕರಿ ಪೊಲೀಸರಿಂದ ಸುಜಾತ ಭಟ್‌ಗೆ ಭದ್ರತೆ

ಬೆಂಗಳೂರು: ನನಗೆ ಆರೋಗ್ಯ ಸರಿಯಿಲ್ಲ, ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ ಎಂದು ಸ್ಥಳೀಯ ಪೊಲೀಸರಿಗೆ ಸುಜಾತ ಭಟ್ (Sujatha Bhat) ಮನವಿ ಮಾಡಿದ್ದಾರೆ.

ಸುಜಾತ ಭಟ್ ಮನವಿ ಹಿನ್ನೆಲೆ ಬನಶಂಕರಿ ಪೊಲೀಸರು (Banashankari Police) ಸುಜಾತ ಭಟ್‌ಗೆ ಭದ್ರತೆ ನೀಡಿದ್ದಾರೆ. ಮನೆಯ ಬಳಿ ಮಾಧ್ಯಮದವರು, ಸಾರ್ವಜನಿಕರು ಬರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಸುಜಾತ ಭಟ್ ಪೊಲೀಸರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಶಿಫ್ಟ್ ಲೆಕ್ಕದಲ್ಲಿ ಪೊಲೀಸರು ಸುಜಾತ ಭಟ್‌ಗೆ ಭದ್ರತೆ ನೀಡುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪರ ಧ್ವನಿ ಎತ್ತಿದವ್ರನ್ನ ಹೇಗೆ ಮಟ್ಟಹಾಕಬೇಕೆಂದು ಮಟ್ಟಣ್ಣನವರ್ ಪ್ಲ್ಯಾನ್ ಮಾಡ್ತಿದ್ರು: ಸೂಲಿಬೆಲೆ

ಇನ್ನು ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂಧ ಸುಜಾತ ಭಟ್ ಮನೆಗೆ ಎಸ್‌ಐಟಿ ಅಧಿಕಾರಿಗಳು ಆಗಮಿಸುವ ಸಾಧ್ಯತೆಯಿದೆ. ವಿಚಾರಣೆಗೆ ಹಾಜರಾಗುವಂತೆ ಬಿಎನ್‌ಎಸ್ 131 ಸೆಕ್ಷನ್‌ನಡಿ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಸುಜಾತ ಭಟ್ ವಿಚಾರಣೆಗೆ ಹಾಜರಾಗದೇ ಆರೋಗ್ಯದ ಕಾರಣ ನೀಡಿದ್ದರು. ಸೆಕ್ಷನ್ ಬಿಎನ್‌ಎಸ್ 180 ಅಡಿ ಸುಜಾತ ಭಟ್ ಹೇಳಿಕೆ ದಾಖಲಿಸಲು ಅವಕಾಶವಿದೆ. ಎಸ್‌ಐಟಿ ಅಧಿಕಾರಿಗಳು ವೀಡಿಯೋ ರೆಕಾರ್ಡ್ನಲ್ಲಿ ಸುಜಾತ ಭಟ್ ಹೇಳಿಕೆ ದಾಖಲಿಸಲಿದ್ದಾರೆ. ಬಿಎನ್‌ಎಸ್ ಕಾಯ್ದೆ ಪ್ರಕಾರ ದೂರುದಾರರು ಅಥವಾ ಸಾಕ್ಷಿದಾರರು 60 ವರ್ಷಕ್ಕಿಂತ ಮೇಲ್ಪಟ್ಟಿದ್ರೆ ಅಥವಾ 18 ವರ್ಷದ ಒಳಗಿನವರಾಗಿದ್ರೆ ತನಿಖಾ ತಂಡ ದೂರುದಾರ/ಸಾಕ್ಷಿದಾರರ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಬಹುದು. ಸದ್ಯ ಅನನ್ಯ ಭಟ್ ನಾಪತ್ತೆ ಪ್ರಕರಣದ ತನಿಖೆ ನಡೆಸ್ತಿರೋ ಎಸ್‌ಐಟಿ ಅಧಿಕಾರಿಗಳು ಸುಜಾತ ಭಟ್ ಮನೆಗೆ ತೆರಳಿ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

ಸದ್ಯ ಬನಶಂಕರಿ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಸುಜಾತ ಭಟ್‌ಗೆ ಭದ್ರತೆ ಒದಗಿಸಲಾಗುತ್ತಿದೆ. ಎಸ್‌ಐಟಿ ಅಧಿಕಾರಿಗಳು ಬರುವ ಸಾಧ್ಯತೆ ಹಿನ್ನೆಲೆ ಬ್ಯಾರಿಕೇಡ್ ಹಾಕಿ ಹದಿನೈದಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ನೀರಿನಲ್ಲಿ ಮುಳುಗಿದ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ – ಮುಸುಕುಧಾರಿಯ ಅಸಲಿಯತ್ತು ಬಯಲು

Share This Article