ಬೆಂಗಳೂರು ಚಿತ್ರೋತ್ಸವಕ್ಕೆ ರೂ. 4.49 ಕೋಟಿ ಮೀಸಲು : ಆರ್.ಅಶೋಕ್

Public TV
1 Min Read

ಮಾರ್ಚ್ 23 ರಿಂದ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವ (film festival) ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ಸರಕಾರ 4.49 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಇನ್ನೂ ಹೆಚ್ಚಿನ ಹಣವನ್ನು ಚಿತ್ರೋತ್ಸವಕ್ಕಾಗಿ ಮೀಸಲಿಟ್ಟಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. 14ನೇ ಚಿತ್ರೋತ್ಸವ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

ಮಾರ್ಚ್ ನಲ್ಲಿ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಇಡೀ ಚಿತ್ರೋದ್ಯಮ ಪಾಲ್ಗೊಳ್ಳುತ್ತಿದ್ದು, ಅತಿಥಿಗಳನ್ನಾಗಿ ಬಾಲಿವುಡ್ ನಟ ನಟಿಯರಿಗೆ ಆಹ್ವಾನ ನೀಡಲಾಗಿದೆ. ರೇಖಾ ಸೇರಿದಂತೆ ಹಲವು ಕಲಾವಿದರು ಫಿಲ್ಮೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ 300ಕ್ಕೂ ಹೆಚ್ಚು ಸಿನಿಮಾಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಅಶೋಕ್ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

ಚಿತ್ರೋತ್ಸವದ ಸ್ಪರ್ಧಿಯಲ್ಲಿ ಭಾಗಿಯಾಗುವ ಸಿನಿಮಾಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಪ್ರತಿ ವರ್ಷವೂ ಮೂರುಲಕ್ಷ ರೂಪಾಯಿ ಪ್ರಶಸ್ತಿ ನೀಡಲಾಗುತ್ತಿತ್ತು. ಈ ಬಾರಿ ಅದನ್ನು ಐದು ಲಕ್ಷಕ್ಕೆ ಏರಿಸಲು ಅಶೋಕ್ ಸಲಹೆ ನೀಡಿದ್ದಾರಂತೆ. ಅಲ್ಲದೇ, ಹೆಚ್ಚು ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳಲಿ ಎನ್ನುವ ಮತ್ತೊಂದು ಸಲಹೆ ಕೂಡ ನೀಡಿದ್ದಾರಂತೆ. ಇತ್ತೀಚೆಗಷ್ಟೇ ಅಗಲಿರುವ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಹಾಗೂ ಗಾಯಕಿ ವಾಣಿ ಜಯರಾಮ್ ಅವರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *