ಕುಡಿದ ಅಮಲಿನಲ್ಲಿ ಜಗಳ – ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

Public TV
1 Min Read

ಬೆಂಗಳೂರು: ಕುಡಿದ ಅಮಲಿನಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ರಾಜಾರಾಜೇಶ್ವರಿ ನಗರದಲ್ಲಿ ನಡೆದಿದೆ.

ಈ ಘಟನೆ ಭಾನುವಾರ ರಾತ್ರಿ ಆರ್.ಆರ್ ನಗರದ ಐಡಿಯಲ್ ಹೋಮ್ಸ್ ನ 15 ನೇ ರಸ್ತೆಯಲ್ಲಿ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು 35 ವರ್ಷದ ಜ್ಞಾನ ಸಾಗರ್ ಎಂದು ಗುರುತಿಸಲಾಗಿದೆ. ಇನ್ನೂ ಕೊಲೆ ಮಾಡಿದವನು ಇವನ ಚಿಕ್ಕಪ್ಪನ ಮಗ ರಂಜಿತ್ ಎಂದು ಹೇಳಲಾಗಿದೆ.

ಕುಡಿದ ಅಮಲಿನಲ್ಲಿ ಸಂಬಂಧಿಗಳಾದ ಜ್ಞಾನ ಸಾಗರ್ ಮತ್ತು ರಂಜಿತ್ ಜಗಳ ಮಾಡಿಕೊಂಡಿದ್ದಾರೆ. ಈ ಜಗಳದಲ್ಲಿ ಜ್ಞಾನ ಸಾಗರ್ ರಂಜಿತ್‍ಗೆ ಹೊಡೆದಿದ್ದ ಎನ್ನಲಾಗಿದೆ. ಇದನ್ನೇ ದ್ವೇಷವಾಗಿ ತೆಗೆದುಕೊಂಡ ರಂಜಿತ್ ಜ್ಞಾನ ಸಾಗರ್‍ ನನ್ನು ಕಲ್ಲಿನಿಂದ ಹಾಗೂ ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ.

ಈ ಸಂಬಂಧ ಆರ್.ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಂಜಿತ್‍ನನ್ನು ಬಂಧಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *