ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ – ಆಯೋಗ ರಚನೆ

Public TV
0 Min Read

ಬೆಂಗಳೂರು: ವಾಲ್ಮೀಕಿ ಸಮುದಾದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರಕ್ಕಾಗಿ ಆಯೋಗವೊಂದನ್ನು ರಚನೆ ಮಾಡಲಾಗಿದೆ.

ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ ನೀಡುವುದರ ಬಗ್ಗೆ ಪರಿಶೀಲನೆಗಾಗಿ ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದು, ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಎರಡು ತಿಂಗಳೊಳಗಾಗಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ಕಳೆದ ಜೂನ್ 25 ರಂದು ಬೆಂಗಳೂರಿನಲ್ಲಿ ಬೃಹತ್ ಧರಣಿ ನಡೆಸಿದ್ದ ವಾಲ್ಮೀಕಿ ಸಮುದಾಯ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಅಧ್ಯಕ್ಷ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆದಿತ್ತು.

Share This Article
Leave a Comment

Leave a Reply

Your email address will not be published. Required fields are marked *