ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ

Public TV
1 Min Read

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ಮದ್ಯಪಾನ ಮುಕ್ತ ಭಾರತ. ಮದ್ಯಪಾನ ವಿರೋಧಿ ಚಳುವಳಿ ಮಾಡಿ ಜಾಗೃತಿ ಮೂಡಿಸಿದಂತಹ ಮಹಾನಾಯಕ. ಆದರೆ ಈಗ ರಾಜಧಾನಿ ಬೆಂಗಳೂರಿನಲ್ಲಿ ಗಾಂಧೀಜಿಯ ಬೃಹತ್ ಪ್ರತಿಮೆ ಮತ್ತು ಚರ್ಚ್ ಮುಂದೆಯೇ ಅತಿ ದೊಡ್ಡ ಬಾರ್ ಓಪನ್ ಆಗಲು ಸಿದ್ಧತೆ ನಡೆದಿದೆ.

ಬೆಂಗಳೂರಿನ ಎಂಜಿ ರಸ್ತೆಯ ಜಂಕ್ಷನ್ ಬಳಿಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಬೃಹತ್ ಗಾಂಧೀಜಿಯವರ ಪ್ರತಿಮೆ ಇದ್ದು ಅದರ ಮುಂದೆಯೇ ಟಾನಿಕ್ ಹೆಸರಿನಲ್ಲಿ ಬೃಹತ್ ಬಾರ್ ಶಾಪ್ ಓಪನ್ ಆಗಲಿದೆ.

ಅಬಕಾರಿ ನಿಯಮದ ಪ್ರಕಾರ 100 ಮೀ. ಅಂತರದಲ್ಲಿ ಧಾರ್ಮಿಕ ಸ್ಥಳ, ಶಾಲೆಗಳು ಇದ್ದರೆ ಬಾರ್ ತೆರೆಯಲು ಅನುಮತಿ ಇಲ್ಲ. ಈ ನಿಯಮಗಳು ಇದ್ದರೂ ಬಾರ್ ತೆರೆಯಲು ಅನುಮತಿಯನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಎದ್ದಿದೆ.

ಏಷ್ಯಾದ ದೊಡ್ಡ ಬಾರ್ ಎಂದು ಹೇಳಲಾಗ್ತಿದ್ದು ಈ ಬಾರಿನ ಸಮೀಪವೇ ಚರ್ಚ್ ಮತ್ತು ಪೊಲೀಸ್ ಸ್ಟೇಷನ್ ಇದ್ದರೂ ಕೂಡ ಅನುಮತಿ ನೀಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅನಿತಾ ರಾಜ್ ನೇತೃತ್ವದ ಬಾರ್ ಎನ್ನುವ ಮಾಹಿತಿ ಲಭ್ಯವಾಗಿದ್ದು, ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್ ಬಗ್ಗೆ ಪ್ರತಿಕ್ರಿಯಿಸಿಲ್ಲ. 120 ಮೀಟರ್ ಅಂತರದಲ್ಲಿದೆ ಚರ್ಚ್ ಬಿಲ್ಡಿಂಗ್ ಇಲ್ಲಿದೆ ಎಂದು ಸಿಬ್ಬಂದಿಯಿಂದ ಹೇಳಿ ಕಳುಹಿಸುತ್ತಿದ್ದಾರೆ.

ಬಾರ್ ನಿರ್ಮಾಣ ಅಬಕಾರಿ ಇಲಾಖೆಗೆ ವಿರುದ್ಧವಾಗಿದ್ದು ಬೇರೆ ಕಡೆ ಬಾರ್ ಓಪನ್ ಮಾಡಿಕೊಳ್ಳಲಿ. ಆದರೆ ಗಾಂಧೀಜಿ ಪ್ರತಿಮೆ ಮುಂದೆ ಮಾತ್ರ ಬೇಡ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *