ರಾಮನಗರ | ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ!

By
1 Min Read

ರಾಮನಗರ: ಹಾಡಹಗಲೇ ರೌಡಿಶೀಟರ್‌ವೊಬ್ಬನನ್ನ (Rowdy Sheeter) ಲಾಂಗು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾರೋಹಳ್ಳಿ (Harohalli) ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ನಡೆದಿದೆ.

- Advertisement -

ಬೆಂಗಳೂರಿನ (Bengaluru) ಕೋಣನಕುಂಟೆ ನಿವಾಸಿ ರೌಡಿಶೀಟರ್ ಸಂತೋಷ್ (33) ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ಹಲವು ಠಾಣೆಗಳಲ್ಲಿ ಮೃತ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಗಳಿದ್ದು, ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

- Advertisement -

- Advertisement -

ಕಾರಿನಿಂದ ಬೈಕ್‌ಗೆ ಗುದ್ದಿ ಆತ ಕೆಳಗೆ ಬಿದ್ದ ಬಳಿಕ ಲಾಂಗು ಮಚ್ಚು ಹಿಡಿದು ಅಟ್ಟಾಡಿಸಿರೋ ನಾಲ್ವರು ದುಷ್ಕರ್ಮಿಗಳು ಬರ್ಬರವಾಗಗಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

- Advertisement -

ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ, ಪರಿಶೀಲನೆ ನಡೆಸಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವೀಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ

Share This Article