ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಯತ್ನಾಳ್

Public TV
1 Min Read

ವಿಜಯಪುರ: ಸಿಎಂ ಸಿದ್ದರಾಮಯ್ಯ (Siddaramaiah) ಏನು ಪಾಕಿಸ್ತಾನದ ಮುಖ್ಯಮಂತ್ರಿನಾ? ಮುಖ್ಯಮಂತ್ರಿ ಎಂದರೆ ಶಾಸಕರು ಅವರ ಬಳಿ ಹೋಗೋದು ಸಹಜ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಕಾರ್ನಾರ್ ವ್ಯಕ್ತಪಡಿಸಿದ್ದಾರೆ.

ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಆತ್ಮೀಯತೆ ಇದೆ. ನಾನು ಆಸ್ಪತ್ರೆಯಲ್ಲಿದ್ದಾಗ ಸಿದ್ದರಾಮಯ್ಯ ನನ್ನ ನೋಡಲು ಬಂದಿದ್ದರು ಎಂದರು. ಇದನ್ನೂ ಓದಿ: ಲೇಟ್ ಆದ್ರೂ ಲೇಟೆಸ್ಟ್ ಆಗಿ ಒಂದೆರಡು ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ರಾಜೂ ಗೌಡ

ಯಾಕೋ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಬಹಳ ಸೈಲೆಂಟ್ ಆಗಿದ್ದಾರೆ. ಯಾಕೆ ಸೈಲೆಂಟ್ ಆಗಿದ್ದೀರಾ ಎಂದು ನಾನು ಸಿದ್ದರಾಮಯ್ಯ ಅವರಿಗೆ ಕೇಳಿದ್ದೆ. ಏನು ಮಾಡೋದು ಯತ್ನಾಳ್ ಇದು ಕೊನೆದಿದೆ. ಯಾರು ಏನೇ ಹೇಳಿದರೂ ತಲೆ ಕೊಡಿಸಿಕೊಳ್ಳಲ್ಲ. ಜನರಿಗೆ ಉತ್ತಮ ಆಡಳಿತ ನೀಡುತ್ತೇನೆ ಅಂದಿದ್ದರು ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರು ಕ್ರಮ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್