ಉಚ್ಛಾಟನೆ ಬಳಿಕ ವಿಜಯಪುರಕ್ಕೆ ಯತ್ನಾಳ್ ಆಗಮನ – ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ; ಹೋಮ, ಹವನ

Public TV
1 Min Read

ವಿಜಯಪುರ: ಯುಗಾದಿ ಪಾಡ್ಯ ಹಿನ್ನೆಲೆ ಬಿಜೆಪಿಯಿಂದ (BJP) ಉಚ್ಛಾಟನೆಯಾದ ಬಳಿಕ ಮೊದಲ ಬಾರಿಗೆ ವಿಜಯಪುರ ನಗರಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basanagouda Patil Yatnal) ಆಗಮಿಸಿದ್ದಾರೆ.

ಬೆಂಗಳೂರಿನಿಂ‌ದ (Bengaluru) ತಡರಾತ್ರಿ ಪ್ರಯಾಣ ಬೆಳೆಸಿ ವಿಜಯಪುರಕ್ಕೆ ಆಗಮಿಸಿದ್ದಾರೆ. ವಿಜಯಪುರದ ಪ್ರಸಿದ್ಧ ಸಿದ್ದೇಶ್ವರ ದೇವಸ್ಥಾನದಲ್ಲಿ ಯತ್ನಾಳ್ ಹಾಗೂ ಕುಟುಂಬ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪತ್ನಿ ಶೈಲಜಾ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅಮಾಯಕರ ಜೀವ ಬಲಿ ಪಡೆಯುತ್ತಲೇ ಇದೆ ಬಿಬಿಎಂಪಿ ಕಸದ ಲಾರಿ – 4 ವರ್ಷಗಳಲ್ಲಿ ಸಾಲು ಸಾಲು ಅಪಘಾತ

ಪೂಜೆ ಬಳಿಕ ಮಂಗಳಾರತಿ ಕಾರ್ಯಕ್ರಮ ಮುಗಿಸಿದ್ದಾರೆ. ನಂತರ ಇದೀಗ ಪ್ರತಿ ವರ್ಷ ಯುಗಾದಿ ಪಾಡ್ಯಾದಂದು ನಡೆಸುವ ಹೋಮ ಹವನ ಪೂಜೆ ಕಾರ್ಯಗಳಲ್ಲಿ ಭಾಗಿ ಆಗಿದ್ದಾರೆ. ಇದನ್ನೂ ಓದಿ: ಯುಗಾದಿ ಹಬ್ಬದ ದೇಸಿ ಸೊಗಡು, ಗ್ರಾಮೀಣ ಕ್ರೀಡೆಗಳ ಗಮ್ಮತ್ತು!

ಹೋಮ ಮುಗಿದ ನಂತರ ಸಿದ್ದೇಶ್ವರ ಸಂಸ್ಥೆಯಿಂದ ನಿರ್ಮಿಸಿರೋ ದಾಸೋಹ ನಿಲಯ ಹಾಗೂ ಕಟ್ಟಡ ಉದ್ಘಾಟನೆ ಪೂಜಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: Myanmar Earthquake | ಭೀಕರ ಭೂಕಂಪಕ್ಕೆ 1,600ಕ್ಕೂ ಹೆಚ್ಚು ಮಂದಿ ಬಲಿ – 3,000ಕ್ಕೂ ಅಧಿಕ ಮಂದಿಗೆ ಗಾಯ

Share This Article