ಜಾರಕಿಹೊಳಿ ಯಾವಾಗ ಸರ್ಕಾರ ಕೆಡವುತ್ತಾರೋ? ಯಾವಾಗ ಸರ್ಕಾರ ತರುತ್ತಾರೋ?: ಜಯಮೃತ್ಯುಂಜಯ ಸ್ವಾಮೀಜಿ

Public TV
1 Min Read

ಬೆಳಗಾವಿ: ನಾವು ಸರ್ಕಾರ ಕೆಡವೋದು ಇಲ್ಲ. ಹೊಸ ಸರ್ಕಾರ ರಚಿಸುವುದೂ ಇಲ್ಲ. ಇರುವ ಸರ್ಕಾರದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ (Panchamasali 2A Reservation) ಪಡೆಯುತ್ತೇವೆ ಎಂದು ಪರೋಕ್ಷವಾಗಿ ಗೋಕಾಕ್ ಬಿಜೆಪಿ (BJP) ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಕುರಿತು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ವ್ಯಂಗ್ಯವಾಡಿದರು.

ಗೋಕಾಕ್ ತಾಲೂಕಿನ ಖನಗಾಂವ-ನಬಾಪುರ ಗ್ರಾಮದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋಕಾಕ್ ರಾಜಕಾರಣಿ ಏನು ಮಾಡೋತ್ತಾರೋ? ಏನೋ? ಯಾವಾಗ ಸರ್ಕಾರ ಕೆಡವುತ್ತಾರೋ? ಯಾವಾಗ ಸರ್ಕಾರ ತರುತ್ತಾರೋ? ಎಂಬ ಬಗ್ಗೆ ಯಾವಾಗಲೂ ಬ್ರೇಕಿಂಗ್ ನ್ಯೂಸ್ ಬರುತ್ತದೆ. ನಾವು ಸರ್ಕಾರ ಕೆಡವೋದು ಇಲ್ಲ. ಹೊಸ ಸರ್ಕಾರ ರಚಿಸುವುದೂ ಇಲ್ಲ. ಇರುವ ಸರ್ಕಾರದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪಡೆಯುತ್ತೇವೆ ಎಂದರು. ಇದನ್ನೂ ಓದಿ: ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುತ್ತೇವೆ: ರೇಣುಕಾಚಾರ್ಯ

ಗೋಕಾಕ್‍ನಲ್ಲಿ ಪಂಚಮಸಾಲಿ ಸಮಾಜ ಸದ್ದು ಮಾಡಬೇಕಿದೆ. ಅದಕ್ಕಾಗಿ ಗೋಕಾಕ್ ಕ್ಷೇತ್ರದ 65 ಗ್ರಾಮಗಳಲ್ಲಿ ಪಂಚಮಸಾಲಿ ಸಮಾಜಕ್ಕೆ ಜಾಗೃತಿ ಮೂಡಿಸುತ್ತಿದ್ದೇನೆ. ನಿಮ್ಮೆಲ್ಲರನ್ನೂ ಹೋರಾಟದಲ್ಲಿ ಧುಮುಕುವಂತೆ ಜಾಗೃತಿ ಮೂಡಿಸುತ್ತಿದ್ದೇನೆ ಎಂದು ಪೂರ್ವಭಾವಿ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ನಮ್ಮ ಮೀಸಲಾತಿಗೆ ಕೈ ಹಾಕಬೇಡಿ, ನಾವೂ ಬೀದಿಗಿಳಿಯಬೇಕಾಗುತ್ತೆ: ಇಸ್ಮಾಯಿಲ್ ಎಚ್ಚರಿಕೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *