ತಾಯಿ ಮೇಲೆ ಆಣೆ ಮಾಡಿ ಸಿಎಂ ಕೊಟ್ಟ ಮಾತು ತಪ್ಪಿದ್ರು – ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

Public TV
2 Min Read

ಹಾವೇರಿ: ಪಂಚಮಸಾಲಿ (Panchamasali) ಸಮುದಾಯಕ್ಕೆ 2ಎ ಮೀಸಲಾತಿ (2A Reservation) ಕಲ್ಪಿಸುವ ವಿಚಾರದಲ್ಲಿ ತಾಯಿ ಮೇಲೆ ಆಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕೊಟ್ಟ ಮಾತು ತಪ್ಪಿದ್ದಾರೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutyunjaya Swamiji) ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಅಧಿವೇಶನದಲ್ಲಿ ನಮಗೆ ಸಿಎಂ ಮಾತು ಕೊಟ್ಟಿದ್ದರು. ತಾಯಿಯ ಮೇಲೆ ಪ್ರಮಾಣ ಮಾಡಿ ಡಿ.29ಕ್ಕೆ 2A ಮೀಸಲಾತಿ ನೀಡುತ್ತೇವೆಂದು ಹೇಳಿದ್ದರು. ಆದರೆ 2C, 2D ಹೊಸ ಪ್ರವರ್ಗ ರಚನೆ ಮಾಡಿ ನಮಗೆ ಘೋಷಣೆ ಮಾಡಿದ್ದಾರೆ. ನಮಗೆ 2A ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: BJP ಸರ್ಕಾರ ಇನ್ನೆರಡು ತಿಂಗಳು ಮಾತ್ರ, ಅದಕ್ಕೆ ಪ್ರತಿಮೆ ಸ್ಥಾಪನೆ ಮಾಡ್ತಿದ್ದಾರೆ- ಡಿಕೆಶಿ

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು, 2D ಮೀಸಲಾತಿಯಲ್ಲಿ ಏನಿದೆ. ಎಷ್ಟು ಮೀಸಲಾತಿ ಎಂಬುವುದರ ಬಗ್ಗೆ ಸ್ಪಷ್ಟನೆ ಕೊಡಲಿಲ್ಲ. ಇದು ಅಸ್ಪಷ್ಟವಾಗಿದ್ದರಿಂದ ನಾವು ಒಪ್ಪಿರಲಿಲ್ಲ. ಅಸಾಂವಿಧಾನಿಕವಾಗಿ ನಿರ್ಣಯ ತೆಗೆದುಕೊಂಡಿದ್ದರು. ನಾವು ಕೇಳಿದ್ದು 2A ಮೀಸಲಾತಿ. ಆದರೆ ಅವರು ನೀಡಿದ್ದು 2Dಯನ್ನು. ತಾಯಿಯ ಮೇಲೆ ಆಣೆ ಮಾಡಿ ಮಾತು ಕೊಟ್ಟು ತಪ್ಪಿದ್ದಾರೆ ಎಂದು ಸಿಎಂ ವಿರುದ್ಧ ಅಸಾಮಾಧಾನ ಹೊರಹಾಕಿದ್ದಾರೆ.

ಒಂದು ದಿನದ ಸಾಂಕೇತಿಕವಾಗಿ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡ್ತಿದ್ದೇವೆ. ನಮ್ಮ ನೋವು ಏನಿದೆ ಇಂದು ಇವತ್ತು ತೋರಿಸಲಿದ್ದೇವೆ. ಮುಂದಿನ ಹೋರಾಟಕ್ಕೆ ಏನು ಮಾಡಬೇಕೆಂದು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ಆದೇಶದ ಕುರಿತು ಮಾತನಾಡಿದ ಅವರು, ಹೈಕೋರ್ಟ್‌ ಇದನ್ನು ನಿರಾಕರಿಸಿದೆ. ನಾವು ಕೂಡ ನಿರಾಕರಣೆ ಮಾಡಿದ್ದೇವೆ. ಎಲ್ಲೋ ಒಂದು ಕಡೆ ನಮ್ಮ ಮೀಸಲಾತಿ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ನಮಗೆ ಅನುಮಾನ ಇತ್ತು. ಈಗ ಅದು ಸತ್ಯವಾಗಿದೆ. ನಮಗೆ 2A ಮೀಸಲಾತಿಯೇ ಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಂದೇ ಕಡೆ ನಿಂತ್ರೆ ಬಲವಿಲ್ಲ; ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು – ಸಿದ್ದುಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *