KPTCL ನೌಕರರಿಗೆ ಶೇ. 20ರಷ್ಟು ವೇತನ ಪರಿಷ್ಕರಣೆ

Public TV
1 Min Read

ಬೆಂಗಳೂರು: ಕೆಪಿಟಿಸಿಎಲ್ (KPTCL) ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ. 20ರಷ್ಟು ವೇತನ (Salary) ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ತಿಳಿಸಿದರು.

ಇದೇ ವೇಳೆ ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಬಗ್ಗೆಯೂ ಮಾತನಾಡಿದರು. ಸಾರಿಗೆ ಇಲಾಖೆ ನೌಕರರಿಗೆ ಶೇ. 15ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಸೋಮಣ್ಣ ಚಾರ್ಜ್‌ಶೀಟ್‌- ಇತ್ಯರ್ಥ ಮಾಡ್ತೀವಿ ಎಂದ ಶಾ

ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುತ್ತಿದೆ. ಸಾಧ್ಯತೆ ಇರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

Share This Article
Leave a Comment

Leave a Reply

Your email address will not be published. Required fields are marked *